ಕೋಲ್ಕತ್ತ: ಭಾರತದ ಆರ್ಚರಿ ಸಂಸ್ಥೆ ಬುಧವಾರ ಮತ್ತೊಂದು ವಿವಾದದಲ್ಲಿ ಸಿಲುಕಿದೆ. ಸಂಸ್ಥೆಯ ಹಂಗಾಮಿ ಅಧ್ಯಕ್ಷ ಸುನಿಲ್ ಶರ್ಮಾ ಇದೇ 26ರಂದು ಸಂಸ್ಥೆಯ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಪ್ರಕಟಿಸಿದ್ದಾರೆ. ಆದರೆ ಕಾರ್ಯದರ್ಶಿ ಮಹಾಸಿಂಗ್ ಇದನ್ನು ಕಾನೂನು ಬಾಹಿರ ಎಂದು ಹೇಳಿ ತಿರಸ್ಕರಿಸಿದ್ದಾರೆ.