<p><strong>ಕೋಲ್ಕತ್ತ:</strong> ಭಾರತದ ಆರ್ಚರಿ ಸಂಸ್ಥೆ ಬುಧವಾರ ಮತ್ತೊಂದು ವಿವಾದದಲ್ಲಿ ಸಿಲುಕಿದೆ. ಸಂಸ್ಥೆಯ ಹಂಗಾಮಿ ಅಧ್ಯಕ್ಷ ಸುನಿಲ್ ಶರ್ಮಾ ಇದೇ 26ರಂದು ಸಂಸ್ಥೆಯ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಪ್ರಕಟಿಸಿದ್ದಾರೆ. ಆದರೆ ಕಾರ್ಯದರ್ಶಿ ಮಹಾಸಿಂಗ್ ಇದನ್ನು ಕಾನೂನು ಬಾಹಿರ ಎಂದು ಹೇಳಿ ತಿರಸ್ಕರಿಸಿದ್ದಾರೆ.</p>.<p>ಹೋದ ವರ್ಷ ಸುಪ್ರೀಂ ಕೋರ್ಟ್ ಸಂಸ್ಥೆಯ ಚುನಾವಣೆಗೆ ತಡೆ ನೀಡಿತ್ತು. ಅಧ್ಯಕ್ಷ ಬಿವಿಪಿ ರಾವ್ ಅವರ ರಾಜೀನಾಮೆಯ ನಂತರ ಸುನಿಲ್ ಶರ್ಮಾ ಮೇ 4ರಂದು ಅಧ್ಯಕ್ಷ ಸ್ಥಾನಕ್ಕೇರಿದ್ದರು. ಚುನಾವಣಾ ಪ್ರಕ್ರಿಯೆಗಳನ್ನು ನಡೆಸುವುದು ಅವರ ಪ್ರಮುಖ ಜವಾಬ್ದಾರಿ ಆಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಭಾರತದ ಆರ್ಚರಿ ಸಂಸ್ಥೆ ಬುಧವಾರ ಮತ್ತೊಂದು ವಿವಾದದಲ್ಲಿ ಸಿಲುಕಿದೆ. ಸಂಸ್ಥೆಯ ಹಂಗಾಮಿ ಅಧ್ಯಕ್ಷ ಸುನಿಲ್ ಶರ್ಮಾ ಇದೇ 26ರಂದು ಸಂಸ್ಥೆಯ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಪ್ರಕಟಿಸಿದ್ದಾರೆ. ಆದರೆ ಕಾರ್ಯದರ್ಶಿ ಮಹಾಸಿಂಗ್ ಇದನ್ನು ಕಾನೂನು ಬಾಹಿರ ಎಂದು ಹೇಳಿ ತಿರಸ್ಕರಿಸಿದ್ದಾರೆ.</p>.<p>ಹೋದ ವರ್ಷ ಸುಪ್ರೀಂ ಕೋರ್ಟ್ ಸಂಸ್ಥೆಯ ಚುನಾವಣೆಗೆ ತಡೆ ನೀಡಿತ್ತು. ಅಧ್ಯಕ್ಷ ಬಿವಿಪಿ ರಾವ್ ಅವರ ರಾಜೀನಾಮೆಯ ನಂತರ ಸುನಿಲ್ ಶರ್ಮಾ ಮೇ 4ರಂದು ಅಧ್ಯಕ್ಷ ಸ್ಥಾನಕ್ಕೇರಿದ್ದರು. ಚುನಾವಣಾ ಪ್ರಕ್ರಿಯೆಗಳನ್ನು ನಡೆಸುವುದು ಅವರ ಪ್ರಮುಖ ಜವಾಬ್ದಾರಿ ಆಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>