ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯ್‌ ಕೃಷ್ಣ, ಬೋಸ್‌ ಮೋಡಿ: ಎಟಿಕೆಎಂಬಿ ಜಯಭೇರಿ

ಎಎಫ್‌ಸಿ ಕಪ್‌ ಫುಟ್‌ಬಾಲ್‌ ಟೂರ್ನಿ: ಬೆಂಗಳೂರು ಎಫ್‌ಸಿಗೆ ನಿರಾಸೆ
Last Updated 18 ಆಗಸ್ಟ್ 2021, 14:06 IST
ಅಕ್ಷರ ಗಾತ್ರ

ಮಾಲೆ, ಮಾಲ್ಡಿವ್ಸ್: ಎರಡು ವರ್ಷಗಳ ಬಳಿಕ ಎಟಿಕೆ ಮೋಹನ್ ಬಾಗನ್ ತಂಡವನ್ನು ಸೋಲಿಸುವ ಬೆಂಗಳೂರು ಎಫ್‌ಸಿ (ಬಿಎಫ್‌ಸಿ) ಕನಸು ನನಸಾಗಲಿಲ್ಲ.

ನಾಯಕ ರಾಯ್‌ ಕೃಷ್ಣ ಹಾಗೂ ಸುಭಾಶಿಶ್ ಬೋಸ್ ಗಳಿಸಿದ ಗೋಲುಗಳ ಬಲದಿಂದ ಎಟಿಕೆ ಮೋಹನ್ ಬಾಗನ್ (ಎಟಿಕೆಎಂಬಿ) ತಂಡವು ಎಎಫ್‌ಸಿ ಕಪ್ ಫುಟ್‌ಬಾಲ್‌ ಟೂರ್ನಿಯಲ್ಲಿ 2–0ಯಿಂದ ಸುನಿಲ್ ಚೆಟ್ರಿ ನಾಯಕತ್ವದ ಬಿಎಫ್‌ಸಿಯನ್ನು ಮಣಿಸಿತು.

ಬುಧವಾರ ನಡೆದ ‘ಡಿ’ ಗುಂಪಿನ ಹಣಾಹಣಿಯಲ್ಲಿ ವಿಜೇತ ತಂಡದ ರಾಯ್‌ ಕೃಷ್ಣ 39ನೇ ನಿಮಿಷದಲ್ಲಿ ಗೋಲು ದಾಖಲಿಸಿದರೆ, ಸುಭಾಶಿಸ್ 46ನೇ ನಿಮಿಷದಲ್ಲಿ ಕಾಲ್ಚಳಕ ತೋರಿದರು.

ಬಿಎಫ್‌ಸಿ ತಂಡವು 2019ರ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್‌) ಟೂರ್ನಿಯಲ್ಲಿ ಎಟಿಕೆಎಂಬಿ ತಂಡವನ್ನು ಕೊನೆಯ ಬಾರಿ ಮಣಿಸಿತ್ತು.

ಪಂದ್ಯದಲ್ಲಿ ಸ್ವತಃ ಚೆಟ್ರಿ ಅವರಿಗೂ ಉತ್ತಮ ಸಾಮರ್ಥ್ಯ ತೋರಲು ಸಾಧ್ಯವಾಗಲಿಲ್ಲ. 68ನೇ ನಿಮಿಷದಲ್ಲಿ ಅವರ ಸ್ಥಾನಕ್ಕೆ ಲಿಯೊನ್ ಅಗಸ್ಟಿನ್ ಬದಲಿ ಆಟಗಾರನಾಗಿ ಬಂದರು.

ಮುಂದಿನ ಪಂದ್ಯದಲ್ಲಿ ಎಟಿಕೆಎಂಬಿ ತಂಡವು ಶನಿವಾರ ಮಾಲ್ಡಿವ್ಸ್‌ನ ಮಜಿಯಾ ಸ್ಪೋರ್ಟ್ಸ್ ಆ್ಯಂಡ್ ರಿಕ್ರಿಯೇಷನ್ ತಂಡವನ್ನು ಎದುರಿಸಲಿದೆ. ಅದೇ ದಿನ ಬೆಂಗಳೂರು ತಂಡಕ್ಕೆ ಬಾಂಗ್ಲಾದೇಶದ ಬಶುಂಧರಾ ಕಿಂಗ್ಸ್ ಸವಾಲು ಎದುರಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT