ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿ ಅವರ ಪತ್ನಿ ಪ್ರತಿಭಾ ಎನ್.ದರ್ಖಾಸು ಅವರುಕತಾರ್ನ ಹಾಮದ್ ಮೆಡಿಕಲ್ ಕಾರ್ಪೋರೇಷನ್ ಸರ್ಕಾರಿ ಅಸ್ಪತ್ರೆಯ ಶುಶ್ರೂಷಕ ಸಿಬ್ಬಂದಿ. ವಿಶ್ವಕಪ್ ಟೂರ್ನಿಯಲ್ಲಿ ಗಾಯಾಳುಗಳ ಆರೈಕೆಗೆ ಆಸ್ಪತ್ರೆಯ ಒಂದು ಸಾವಿರ ಶುಶ್ರೂಷಕರನ್ನು ನೇಮಕ ಮಾಡಲಾಗಿದೆ. ಅವರಲ್ಲಿ ಪ್ರತಿಭಾ ಅವರೂ ಒಬ್ಬರು.