<p><strong>ಕೋಲ್ಕತ್ತ:</strong> ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್ಡಬ್ಲ್ಯು) ಸಂಸ್ಥೆಯು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ಅವರನ್ನು ಜೆಎಸ್ಡಬ್ಲ್ಯು ಸಿಮೆಂಟ್ನ ಪ್ರಚಾರ ರಾಯಭಾರಿಗಳನ್ನಾಗಿ ನೇಮಿಸಿದೆ.</p>.<p>ಭಾರತದ ಪಶ್ಚಿಮ ಭಾಗದ ರಾಜ್ಯಗಳಿಗೆ ತನ್ನ ಮಾರುಕಟ್ಟೆಯನ್ನು ವಿಸ್ತರಿಸುವ ಉದ್ದೇಶದಿಂದ ಜೆಎಸ್ಎಬ್ಲ್ಯು ಈ ನಿರ್ಧಾರ ಕೈಗೊಂಡಿದೆ.</p>.<p>‘ಜೆಎಸ್ಡಬ್ಲ್ಯು ವಿಶ್ವಾಸಾರ್ಹ ಕಂಪನಿ. ಗುಣಮಟ್ಟದಲ್ಲೂ ಮುಂಚೂಣಿಯಲ್ಲಿದೆ. ಈ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದಕ್ಕೆ ಸಂತಸವಾಗಿದೆ’ ಎಂದು ಗಂಗೂಲಿ ತಿಳಿಸಿದ್ದಾರೆ.</p>.<p>‘ಜೆಎಸ್ಡಬ್ಲ್ಯು ಸಂಸ್ಥೆಯು ಸಮಾಜದ ಏಳ್ಗೆಗಾಗಿ ಶ್ರಮಿಸುತ್ತಿದೆ. ಗುಣಮಟ್ಟದ ಉತ್ಪನ್ನಗಳಿಗೆ ಹೆಸರುವಾಸಿಯಾಗಿದೆ. ಈ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿರುವುದಕ್ಕೆ ಖುಷಿ ಇದೆ’ ಎಂದು ಚೆಟ್ರಿ ಹೇಳಿದ್ದಾರೆ.</p>.<p>ಚೆಟ್ರಿ ಅವರು ಜೆಎಸ್ಡಬ್ಲ್ಯು ಒಡೆತನದ ಬೆಂಗಳೂರು ಫುಟ್ಬಾಲ್ ಕ್ಲಬ್ನ (ಬಿಎಫ್ಸಿ) ನಾಯಕರೂ ಆಗಿದ್ದಾರೆ. ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್), ಐ ಲೀಗ್ ಸೇರಿದಂತೆ ಹಲವು ಟೂರ್ನಿಗಳಲ್ಲಿ ಈ ತಂಡ ಪ್ರಶಸ್ತಿ ಗೆದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್ಡಬ್ಲ್ಯು) ಸಂಸ್ಥೆಯು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ಅವರನ್ನು ಜೆಎಸ್ಡಬ್ಲ್ಯು ಸಿಮೆಂಟ್ನ ಪ್ರಚಾರ ರಾಯಭಾರಿಗಳನ್ನಾಗಿ ನೇಮಿಸಿದೆ.</p>.<p>ಭಾರತದ ಪಶ್ಚಿಮ ಭಾಗದ ರಾಜ್ಯಗಳಿಗೆ ತನ್ನ ಮಾರುಕಟ್ಟೆಯನ್ನು ವಿಸ್ತರಿಸುವ ಉದ್ದೇಶದಿಂದ ಜೆಎಸ್ಎಬ್ಲ್ಯು ಈ ನಿರ್ಧಾರ ಕೈಗೊಂಡಿದೆ.</p>.<p>‘ಜೆಎಸ್ಡಬ್ಲ್ಯು ವಿಶ್ವಾಸಾರ್ಹ ಕಂಪನಿ. ಗುಣಮಟ್ಟದಲ್ಲೂ ಮುಂಚೂಣಿಯಲ್ಲಿದೆ. ಈ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದಕ್ಕೆ ಸಂತಸವಾಗಿದೆ’ ಎಂದು ಗಂಗೂಲಿ ತಿಳಿಸಿದ್ದಾರೆ.</p>.<p>‘ಜೆಎಸ್ಡಬ್ಲ್ಯು ಸಂಸ್ಥೆಯು ಸಮಾಜದ ಏಳ್ಗೆಗಾಗಿ ಶ್ರಮಿಸುತ್ತಿದೆ. ಗುಣಮಟ್ಟದ ಉತ್ಪನ್ನಗಳಿಗೆ ಹೆಸರುವಾಸಿಯಾಗಿದೆ. ಈ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿರುವುದಕ್ಕೆ ಖುಷಿ ಇದೆ’ ಎಂದು ಚೆಟ್ರಿ ಹೇಳಿದ್ದಾರೆ.</p>.<p>ಚೆಟ್ರಿ ಅವರು ಜೆಎಸ್ಡಬ್ಲ್ಯು ಒಡೆತನದ ಬೆಂಗಳೂರು ಫುಟ್ಬಾಲ್ ಕ್ಲಬ್ನ (ಬಿಎಫ್ಸಿ) ನಾಯಕರೂ ಆಗಿದ್ದಾರೆ. ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್), ಐ ಲೀಗ್ ಸೇರಿದಂತೆ ಹಲವು ಟೂರ್ನಿಗಳಲ್ಲಿ ಈ ತಂಡ ಪ್ರಶಸ್ತಿ ಗೆದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>