<p><strong>ಬೆಂಗಳೂರು:</strong> ‘ನಾನು ಎರಡು ವರ್ಷ ಮುಂಚೆ ಗೃಹಸಚಿವನಾಗಿದ್ದರೆ ಭಯ ಹುಟ್ಟಿಸುವ ಫ್ಯಾಕ್ಟರಿಗಳನ್ನೆಲ್ಲಾ ಮುಚ್ಚುತ್ತಿದ್ದೆ. ಈಗಲೂ ಈ ಕೆಲಸ ಮಾಡಲು ಪ್ರಯತ್ನಿಸುತ್ತಿದ್ದೇನೆ’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್ತಿನಲ್ಲಿ ಬುಧವಾರ ಹೇಳಿದರು.</p>.<p>ಅದಕ್ಕೆ, ವಿರೋಧ ಪಕ್ಷದ ನಾಯಕ ಕೆ. ಎಸ್.ಈಶ್ವರಪ್ಪ, ‘ಕೊನೆಗೂ ನೀವು ಈ ಹಿಂದಿನ ಗೃಹ ಸಚಿವರು ನಾಲಾಯಕ್ ಎಂದು ಒಪ್ಪಿಕೊಂಡಿರಿ’ ಎಂದು ವ್ಯಂಗ್ಯವಾಡಿದರು.</p>.<p>ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಸದಸ್ಯರ ಆರೋಪಕ್ಕೆ ಸಚಿವರು ಉತ್ತರಿಸಿದರು.‘ಹಿಂದೂಗಳ ಹತ್ಯೆಯಲ್ಲಿ ಪಿಎಫ್ಐ ಹಾಗೂ ಎಸ್ಡಿಪಿಐ ಕೈವಾಡ ಇದೆ. ಈ ಸಂಘಟನೆಯನ್ನು ನಿಷೇಧಿಸಬೇಕು ಎಂದು ಬಿಜೆಪಿಯವರು ಒತ್ತಾಯಿಸುತ್ತಿದ್ದಾರೆ. ಎರಡೂ ಕೈ ಸೇರದೇ ಚಪ್ಪಾಳೆ ಆಗದು. 13 ಮುಸ್ಲಿಮರ ಹತ್ಯೆ ಪ್ರಕರಣಗಳಲ್ಲಿ ಬಜರಂಗದಳ, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಭಾಗಿಯಾಗಿದೆ. ಈ ಕೊಲೆಗಳು ಕೂಡಾ ತಪ್ಪೇ. ಪಿಎಫ್ಐ, ಎಸ್ಡಿಪಿಐ ನಿಷೇಧಿಸಿದರೆ, ಸಂಘಪರಿವಾರವನ್ನೂ ನಿಷೇಧಿಸಬೇಕಾಗುತ್ತದೆ’ ಎಂದರು.</p>.<p>‘ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಲೇ ಪಿಎಫ್ಐ ನಿಷೇಧ ಮಾಡಬಹುದಿತ್ತು. ಕಾಂಗ್ರೆಸ್ ಮತಗಳನ್ನು ಅವರು ವಿಭಜನೆ ಮಾಡುತ್ತಾರೆ ಎಂಬ ಕಾರಣಕ್ಕೆ ನಿಷೇಧಿಸಿಲ್ಲ’ ಎಂದು ರೆಡ್ಡಿ ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಾನು ಎರಡು ವರ್ಷ ಮುಂಚೆ ಗೃಹಸಚಿವನಾಗಿದ್ದರೆ ಭಯ ಹುಟ್ಟಿಸುವ ಫ್ಯಾಕ್ಟರಿಗಳನ್ನೆಲ್ಲಾ ಮುಚ್ಚುತ್ತಿದ್ದೆ. ಈಗಲೂ ಈ ಕೆಲಸ ಮಾಡಲು ಪ್ರಯತ್ನಿಸುತ್ತಿದ್ದೇನೆ’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್ತಿನಲ್ಲಿ ಬುಧವಾರ ಹೇಳಿದರು.</p>.<p>ಅದಕ್ಕೆ, ವಿರೋಧ ಪಕ್ಷದ ನಾಯಕ ಕೆ. ಎಸ್.ಈಶ್ವರಪ್ಪ, ‘ಕೊನೆಗೂ ನೀವು ಈ ಹಿಂದಿನ ಗೃಹ ಸಚಿವರು ನಾಲಾಯಕ್ ಎಂದು ಒಪ್ಪಿಕೊಂಡಿರಿ’ ಎಂದು ವ್ಯಂಗ್ಯವಾಡಿದರು.</p>.<p>ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಸದಸ್ಯರ ಆರೋಪಕ್ಕೆ ಸಚಿವರು ಉತ್ತರಿಸಿದರು.‘ಹಿಂದೂಗಳ ಹತ್ಯೆಯಲ್ಲಿ ಪಿಎಫ್ಐ ಹಾಗೂ ಎಸ್ಡಿಪಿಐ ಕೈವಾಡ ಇದೆ. ಈ ಸಂಘಟನೆಯನ್ನು ನಿಷೇಧಿಸಬೇಕು ಎಂದು ಬಿಜೆಪಿಯವರು ಒತ್ತಾಯಿಸುತ್ತಿದ್ದಾರೆ. ಎರಡೂ ಕೈ ಸೇರದೇ ಚಪ್ಪಾಳೆ ಆಗದು. 13 ಮುಸ್ಲಿಮರ ಹತ್ಯೆ ಪ್ರಕರಣಗಳಲ್ಲಿ ಬಜರಂಗದಳ, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಭಾಗಿಯಾಗಿದೆ. ಈ ಕೊಲೆಗಳು ಕೂಡಾ ತಪ್ಪೇ. ಪಿಎಫ್ಐ, ಎಸ್ಡಿಪಿಐ ನಿಷೇಧಿಸಿದರೆ, ಸಂಘಪರಿವಾರವನ್ನೂ ನಿಷೇಧಿಸಬೇಕಾಗುತ್ತದೆ’ ಎಂದರು.</p>.<p>‘ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಲೇ ಪಿಎಫ್ಐ ನಿಷೇಧ ಮಾಡಬಹುದಿತ್ತು. ಕಾಂಗ್ರೆಸ್ ಮತಗಳನ್ನು ಅವರು ವಿಭಜನೆ ಮಾಡುತ್ತಾರೆ ಎಂಬ ಕಾರಣಕ್ಕೆ ನಿಷೇಧಿಸಿಲ್ಲ’ ಎಂದು ರೆಡ್ಡಿ ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>