ಬೆಂಗಳೂರು: ಕರ್ನಾಟಕ ತಂಡದವರು ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ ಯೂತ್ ಗೇಮ್ಸ್ ಫುಟ್ಬಾಲ್ ಟೂರ್ನಿಯ ಫೈನಲ್ನಲ್ಲಿ ನಿರಾಸೆ ಅನುಭವಿಸಿ, ಬೆಳ್ಳಿ ಪದಕ ಪಡೆದುಕೊಂಡರು.
ಶುಕ್ರವಾರ ನಡೆದ ಫೈನಲ್ನಲ್ಲಿ ಕರ್ನಾಟಕ ತಂಡವನ್ನು 2–0 ಗೋಲುಗಳಿಂದ ಮಣಿಸಿದ ಕೇರಳ, ಚಿನ್ನ ಗೆದ್ದುಕೊಂಡಿತು. ಪ್ರಬಲ ಪೈಪೋಟಿ ನಡೆದ ಪಂದ್ಯದ 31ನೇ ನಿಮಿಷದಲ್ಲಿ ಸಿ.ಪಿ.ಶ್ರೀರಾಜ್ ಅವರು ಕೇರಳ ತಂಡಕ್ಕೆ ಮೊದಲ ಗೋಲು ತಂದಿತ್ತರು. ಕೆ.ಕಿರಣ್ 43ನೇ ನಿಮಿಷದಲ್ಲಿ ಎರಡನೇ ಗೋಲು ಗಳಿಸಿದರು.
ಕರ್ನಾಟಕ ತಂಡ ಮರುಹೋರಾಟ ನಡೆಸಲು ಪ್ರಯತ್ನಿಸಿತಾದರೂ, ಕೇರಳದ ಡಿಫೆಂಡರ್ಗಳು ಅವಕಾಶ ನೀಡಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.