ಗ್ರಾಮದಲ್ಲಿ ಸುಮಾರು 2 ಸಾವಿರ ಜನಸಂಖ್ಯೆಯಿದ್ದು, ಅದರಲ್ಲಿ ಹೆಚ್ಚಾಗಿ ಪರಿಶಿಷ್ಟ ಸಮುದಾಯದವರು ಇದ್ದಾರೆ. ಕೊನೆ ಪಕ್ಷ ಶುದ್ಧ ಕುಡಿಯುವ ನೀರು ದೊರಕುತ್ತದೆ ಎಂಬ ಆಸೆಯು ಕಮರಿಹೋಗಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇದರ ಬಗ್ಗೆ ತನಿಖೆ ನಡೆಸಿ ಮತ್ತೊಂದು ಹೊಸದಾಗಿ ಕುಡಿಯುವ ನೀರಿನ ಘಟಕ ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರಿಗೆ ಮನವಿ ಮಾಡಿದ್ದಾರೆ.