‘ಭಾರತದಲ್ಲಿ ಫುಟ್ಬಾಲ್ ಬೆಳವಣಿಗೆಗಾಗಿ ಕಪಾಡಿಯಾ ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಆದರೆ ದೆಹಲಿ ವಿಶ್ವವಿದ್ಯಾಲಯ ಅವರ ಪಿಂಚಣಿ ಮೊತ್ತಕ್ಕೆ ಸಂಬಂಧಿಸಿ ಸರಿಯಾಗಿ ಸ್ಪಂದಿಸದೇ ಇರುವ ಕಾರಣ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬೇಸರವಾಯಿತು. ಅವರ ಆರೋಗ್ಯ ಹದಗೆಟ್ಟಿದ್ದು ತುರ್ತು ಚಿಕಿತ್ಸೆ ಬೇಕಾಗಿದೆ. ಆದ್ದರಿಂದ ಆರ್ಥಿಕ ನೆರವು ನೀಡಲು ಇಲಾಖೆ ತಕ್ಷಣ ಮುಂದಾಯಿತು’ ಎಂದು ಕ್ರೀಡಾ ಸಚಿವ ಕಿರಣ್ ರಿಜುಜು ತಿಳಿಸಿದ್ದಾರೆ.