<p><strong>ಚಂಡೀಗಢ</strong>: ‘ನಿರೀಕ್ಷಿತವಲ್ಲದ ಬೆಳವಣಿಗೆ’ಯ ಕಾರಣ ಇಂಡಿಯನ್ ಸೂಪರ್ಲೀಗ್ (ಐಎಸ್ಎಲ್) ತಂಡ ಪಂಜಾಬ್ ಎಫ್ಸಿ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿರುವ ತನ್ನ ಕೊನೆಯ ಎರಡು ಪಂದ್ಯಗಳನ್ನು ಪ್ರೇಕ್ಷಕರ ನಿರ್ಬಂಧದ ನಡುವೆ ಆಡಲಿದೆ ಎಂದು ಕ್ಲಬ್ ಗುರುವಾರ ಪ್ರಕಟಿಸಿದೆ.</p>.<p>ಕೋಲ್ಕತ್ತ ದೈತ್ಯ ಕ್ಲಬ್ಗಳಾದ ಮೋಹನ್ ಬಾಗನ್ ಮತ್ತು ಈಸ್ಟ್ ಬೆಂಗಾಲ್ ವಿರುದ್ಧ ಕ್ರಮವಾಗಿ ಏಪ್ರಿಲ್ 6 ಮತ್ತು 10ರಂದು ನಡೆಯುವ ಪಂದ್ಯಗಳಿಗೆ ಪ್ರೇಕ್ಷಕರಿಗೆ ಅವಕಾಶವಿರುವುದಿಲ್ಲ.</p>.<p>ಈ ಕ್ರೀಡಾಂಗಣದ ಅಧಿಕಾರಿಗಳಿಗೆ ಮಾರ್ಚ್ 15ರಂದು ಡೆಲ್ಲಿ ಅಗ್ನಿಶಾಮಕ ಸೇವೆಗಳ ಇಲಾಖೆ, ಸೂಕ್ತ ಸುರಕ್ಷತಾ ವ್ಯವಸ್ಥೆ ಕಲ್ಪಿಸುವವರೆಗೆ ಯಾವುದೇ ಪಂದ್ಯ ನಡೆಸದಂತೆ ಸೂಚಿಸಿ ನೋಟಿಸ್ ನೀಡಿತ್ತು.</p>.<p>ಮಾರ್ಚ್ 13ರಂದು ಕ್ರೀಡಾಂಗಣದ ಸಿಸಿಟಿವಿ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದರು. ಸಾವಿಗೆ ನಿರ್ಲಕ್ಷ್ಯ ಕಾರಣ ಎಂದು ದೂರು ದಾಖಲಾಗಿತ್ತು.</p>.<p>ಅಗ್ನಿ ಸುರಕ್ಷತಾ ಪ್ರಮಾಣಪತ್ರ ನವೀಕರಿಸದಿರುವುದು ವಿಚಾರಣೆಯ ವೇಳೆ ಬಹಿರಂಗವಾಗಿತ್ತು. ಿದೇ ಕಾರಣಕ್ಕೆ ನೋಟಿಸ್ ನೀಡಲಾಗಿತ್ತು.</p>.<p>ಪಂದ್ಯಕ್ಕೆ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಕಾರಣ ನಿರ್ಬಂಧದ ಕ್ರಮ ಕೈಗೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ‘ನಿರೀಕ್ಷಿತವಲ್ಲದ ಬೆಳವಣಿಗೆ’ಯ ಕಾರಣ ಇಂಡಿಯನ್ ಸೂಪರ್ಲೀಗ್ (ಐಎಸ್ಎಲ್) ತಂಡ ಪಂಜಾಬ್ ಎಫ್ಸಿ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿರುವ ತನ್ನ ಕೊನೆಯ ಎರಡು ಪಂದ್ಯಗಳನ್ನು ಪ್ರೇಕ್ಷಕರ ನಿರ್ಬಂಧದ ನಡುವೆ ಆಡಲಿದೆ ಎಂದು ಕ್ಲಬ್ ಗುರುವಾರ ಪ್ರಕಟಿಸಿದೆ.</p>.<p>ಕೋಲ್ಕತ್ತ ದೈತ್ಯ ಕ್ಲಬ್ಗಳಾದ ಮೋಹನ್ ಬಾಗನ್ ಮತ್ತು ಈಸ್ಟ್ ಬೆಂಗಾಲ್ ವಿರುದ್ಧ ಕ್ರಮವಾಗಿ ಏಪ್ರಿಲ್ 6 ಮತ್ತು 10ರಂದು ನಡೆಯುವ ಪಂದ್ಯಗಳಿಗೆ ಪ್ರೇಕ್ಷಕರಿಗೆ ಅವಕಾಶವಿರುವುದಿಲ್ಲ.</p>.<p>ಈ ಕ್ರೀಡಾಂಗಣದ ಅಧಿಕಾರಿಗಳಿಗೆ ಮಾರ್ಚ್ 15ರಂದು ಡೆಲ್ಲಿ ಅಗ್ನಿಶಾಮಕ ಸೇವೆಗಳ ಇಲಾಖೆ, ಸೂಕ್ತ ಸುರಕ್ಷತಾ ವ್ಯವಸ್ಥೆ ಕಲ್ಪಿಸುವವರೆಗೆ ಯಾವುದೇ ಪಂದ್ಯ ನಡೆಸದಂತೆ ಸೂಚಿಸಿ ನೋಟಿಸ್ ನೀಡಿತ್ತು.</p>.<p>ಮಾರ್ಚ್ 13ರಂದು ಕ್ರೀಡಾಂಗಣದ ಸಿಸಿಟಿವಿ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದರು. ಸಾವಿಗೆ ನಿರ್ಲಕ್ಷ್ಯ ಕಾರಣ ಎಂದು ದೂರು ದಾಖಲಾಗಿತ್ತು.</p>.<p>ಅಗ್ನಿ ಸುರಕ್ಷತಾ ಪ್ರಮಾಣಪತ್ರ ನವೀಕರಿಸದಿರುವುದು ವಿಚಾರಣೆಯ ವೇಳೆ ಬಹಿರಂಗವಾಗಿತ್ತು. ಿದೇ ಕಾರಣಕ್ಕೆ ನೋಟಿಸ್ ನೀಡಲಾಗಿತ್ತು.</p>.<p>ಪಂದ್ಯಕ್ಕೆ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಕಾರಣ ನಿರ್ಬಂಧದ ಕ್ರಮ ಕೈಗೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>