ಬೆಂಗಳೂರು ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆದ ಅರ್ಹತಾ ಪಂದ್ಯದಲ್ಲಿ ರಾಜ್ಯ ತಂಡಕ್ಕೆ 2–0ಯಿಂದ ಜಯ ಒಲಿಯಿತು. ಕರ್ನಾಟಕ ತಂಡದ ಎನ್. ಸೋಲೈಮಲಾಯಿ ಅವರು 10ನೇ ನಿಮಿಷದಲ್ಲಿ ದೊರೆತ ಪೆನಾಲ್ಟಿ ಅವಕಾಶದಲ್ಲಿ ಮೊದಲ ಗೋಲು ದಾಖಲಿಸಿದರು. ಬಳಿಕ ಉಭಯ ತಂಡಗಳು ಗೋಲು ಗಳಿಕೆಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಸಿದವು.