ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೋಷ್‌ ಟ್ರೋಫಿ ಫುಟ್‌ಬಾಲ್ ಟೂರ್ನಿ: ಕರ್ನಾಟಕ– ಪಂಜಾಬ್ ಪಂದ್ಯ ಡ್ರಾ

Last Updated 11 ಫೆಬ್ರವರಿ 2023, 4:50 IST
ಅಕ್ಷರ ಗಾತ್ರ

ಬೆಂಗಳೂರು: ದಿಟ್ಟ ಆಟವಾಡಿದ ಕರ್ನಾಟಕ ತಂಡದವರು ಸಂತೋಷ್‌ ಟ್ರೋಫಿ ಫುಟ್‌ಬಾಲ್ ಟೂರ್ನಿಯ ಪಂದ್ಯದಲ್ಲಿ ಪಂಜಾಬ್ ತಂಡದೊಂದಿಗೆ ಡ್ರಾ ಸಾಧಿಸಿದರು.

ಒಡಿಶಾದಲ್ಲಿ ನಡೆಯುತ್ತಿರುವ ಟೂರ್ನಿಯ ಎ ಗುಂಪಿನ ಹಣಾಹಣಿಯಲ್ಲಿ ಕರ್ನಾಟಕ 2–2ರಿಂದ ಪಂಜಾಬ್‌ ತಂಡದೊಂದಿಗೆ ಸಮಬಲ ಸಾಧಿಸಿತು. ಪಂಜಾಬ್ ತಂಡಕ್ಕಾಗಿ ಕಮಲ್‌ ದೀಪ್‌ (65ನೇ ನಿಮಿಷ) ಮತ್ತು ಬಿಪುಲ್‌ ಕಾಲಾ (69ನೇ ನಿ.) ಗೋಲು ಗಳಿಸಿ ಮುನ್ನಡೆ ತಂದುಕೊಟ್ಟಿದ್ದರು. ಕಮಲೇಶ್ ಪಿ. (82ನೇ ನಿ.) ಮತ್ತು ರಾಬಿನ್ ಯಾದವ್‌ (90+3ನೇ ನಿ.) ಗಳಿಸಿದ ಗೋಲುಗಳು ಕರ್ನಾಟಕ ಡ್ರಾ ಸಾಧಿಸಲು ಕಾರಣವಾದವು.

ಭಾನುವಾರ ನಡೆಯಲಿರುವ ಮುಂದಿನ ಪಂದ್ಯದಲ್ಲಿ ಕರ್ನಾಟಕ ತಂಡವು ಕೇರಳ ತಂಡವನ್ನು ಎದುರಿಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT