ರಸ್ತೆಯುದ್ದಕ್ಕೂ ಬಿಜೆಪಿ ಕಾರ್ಯಕರ್ತರಿಂದ ಜೈಕಾರ, ಚೆಂಡೆ ವಾದನ, ಚಿಲಿಪಿಲಿ ಗೊಂಬೆ ನೃತ್ಯ ವಿಶೇಷ ಮೆರುಗು ನೀಡಿತು. ಮಹಿಳೆಯರ ಸಹಿತ ಅಪಾರ ಮಂದಿ ಪಾಲ್ಗೊಂಡರು. ಇದೇ ವೇಳೆ ಪಕ್ಷದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಮುಖಂಡರಿಗೆ ಜೈಕಾರ ಹಾಕಿದರು. ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಪತ್ನಿ ಕಮಲಾ ಭಟ್, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಮತ್ತಿತರರು ಇದ್ದರು.