ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ ಆಯೋಜಿಸಿದ್ದ ಫೇಸ್ಬುಕ್ ಸಂವಾದದಲ್ಲಿ ಮಾತನಾಡಿದ ಅವರು, ‘ಐಎಸ್ಎಲ್ನ ಮೊದಲ ಆವೃತ್ತಿಯ ಫೈನಲ್ನಲ್ಲಿ ನಾವು ಎಟಿಕೆ ವಿರುದ್ಧ ಸೋತಿದ್ದೆವು. ತೀವ್ರ ನಿರಾಶೆಗೊಂಡು ಕುಸಿದಿದ್ದೆವು. ಆಗ ಸಚಿನ್ ನಮ್ಮನ್ನುದ್ದೇಶಿಸಿ ಹೇಳಿದ್ದ ಮಾತು ಇಂದಿಗೂ ಮನದಲ್ಲಿದೆ. ಆರು ಬಾರಿ ವಿಶ್ವಕಪ್ ಟೂರ್ನಿಗಳಲ್ಲಿ ಆಡಿದ ನಂತರ ಒಂದು ವಿಶ್ವಕಪ್ ಜಯಿಸಲು ಸಾಧ್ಯವಾಯಿತು. ನೀವು ಮೊದಲ ಸಲ ಸೋತಿದ್ದೀರಿ. ಅದಕ್ಕಾಗಿ ಇಷ್ಟೊಂದು ನಿರಾಶೆಗೊಳ್ಳುವ ಅವಶ್ಯಕತೆ ಇಲ್ಲ’ ಎಂದರು.