ಅಮಾನತು ತೆರವುಗೊಳಿಸುವ ನಿಟ್ಟಿನಲ್ಲಿ ಠಾಕೂರ್ ನೇತೃತ್ವದ ಕ್ರೀಡಾ ಸಚಿವಾಲಯವು ಸಕ್ರಿಯವಾಗಿ ಕೆಲಸ ಮಾಡಿತ್ತು. ಎಐಎಫ್ಎಫ್ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಕ್ರೀಡಾ ಸಚಿವಾಲಯವು ಸುಪ್ರೀಂ ಕೋರ್ಟ್ಅನ್ನು ಕೋರಿತ್ತು. ಸುಪ್ರೀಂ ಕೋರ್ಟ್ ತನ್ನ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿದ್ದು, ಅಮಾನತು ತೆರವಿನ ಹಾದಿಯನ್ನು ಸುಗಮಗೊಳಿಸಿತ್ತು.