ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಭಾರತ ‘ಎ’ ತಂಡದ ನಾಯಕ ಪ್ರಿಯಾಂಕ್ ಪಾಂಚಾಲ್, ‘ಮೊದಲ ಪಂದ್ಯದಲ್ಲಿ ತಂಡ ಪೂರ್ಣ ಸಾಮರ್ಥ್ಯದೊಂದಿಗೆ ಆಡಿತ್ತು. ಎರಡನೇ ಪಂದ್ಯದಲ್ಲಿಯೂ ಉತ್ತಮ ಆಟವನ್ನು ಮುಂದುವರಿಸಿ ಗೆಲುವು ಸಾಧಿಸುವ ವಿಶ್ವಾಸ ಇದೆ’ ಎಂದರು. ಬೌಲರ್ ಅಂಕಿತ್ ರಜಪೂತ್ ಗಾಯಗೊಂಡಿದ್ದು, ಅವರ ಬದಲಿಗೆ ಯಾರನ್ನು ಆಡಿಸಬೇಕು ಎಂದು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.