ನ್ಯೂಜಿಲೆಂಡ್ ಸರಣಿಗೆ ಮನೀಷ್ ಪಾಂಡೆ ಅವರನ್ನು ಆಯ್ಕೆ ಮಾಡಲಾಗಿರಲಿಲ್ಲ. ಆದರೆ ರಣಜಿ ಟ್ರೋಫಿ ಟೂರ್ನಿಯಲ್ಲಿ ಅವರು ರನ್ಗಳ ರಾಶಿ ಹಾಕಿದ್ದರು. ಆ ಮೂಲಕ ತಮ್ಮ ಸಾಮರ್ಥ್ಯವನ್ನು ಆಯ್ಕೆ ಸಮಿತಿಗೆ ತಿಳಿಸಿದ್ದರು. ಅಂಬಟಿ ರಾಯುಡು ಆಯ್ಕೆಯಾಗದೇ ಹೋದರೆ ಮನೀಷ್ ಸ್ಥಾನ ಗಳಿಸಬಹುದು. ಉಳಿದಂತೆ ಮೂವರು ಸ್ಪಿನ್ನರ್ಗಳಾದ ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್ ಮತ್ತು ರವೀಂದ್ರ ಜಡೇಜ, ಮಧ್ಯಮವೇಗಿಗಳಾದ ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ಆಯ್ಕೆಯಾಗುವುದು ಬಹುತೇಕ ಖಚಿತ. ಜಸ್ಪ್ರೀತ್ ಬೂಮ್ರಾ ಕೂಡ ಮರಳಬಹುದು.