ಪ್ರತಿ ಜಿಲ್ಲೆಯಲ್ಲೂ ಒಂದು ಕ್ರೀಡಾ ಚಟುವಟಿಕೆಗೆ ಸೀಮಿತವಾಗಿ ಈ ಕೇಂದ್ರಗಳನ್ನು ಆರಂಭಿಸಬೇಕು. ನಿರ್ದಿಷ್ಟ ಕ್ರೀಡೆಗೆ ಸಂಬಂಧಿಸಿದಂತೆ ಮಾಜಿ ಚಾಂಪಿಯನ್, ಅಥ್ಲೀಟ್ಗಳನ್ನು ತರಬೇತುದಾರರನ್ನಾಗಿ ನೇಮಿಸಬೇಕು. ಭಾರತೀಯ ಕ್ರೀಡಾ ಪ್ರಾಧಿಕಾರದ (ಸಾಯ್) ಬೆಂಗಳೂರು ಪ್ರಾದೇಶಿಕ ಕೇಂದ್ರ ಮತ್ತು ಇತರ ಸಲೆಹೆಗಾರರ ಜತೆ ಸಮಾಲೋಚಿಸಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಖೇಲೋ ಇಂಡಿಯಾದ ಹಿರಿಯ ನಿರ್ದೇಶಕ ಸತ್ಯನಾರಾಯಣ ಮೀನಾ ಮೇ 21ರಂದು ರಾಜ್ಯದ ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎಂದು ಅವರು ಹೇಳಿದ್ದಾರೆ.