<p><strong>ಜಮಶೆಡ್ಪುರ: </strong>ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ, ಭಾರತದ ಆರ್ಚರಿ ಕೋಚ್ ಧರ್ಮೇಂದ್ರ ತಿವಾರಿ ಅವರಿಗೆ ಪಾರ್ಶ್ವವಾಯು ಬಾಧಿಸಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.</p>.<p>ತಾರಾ ಆರ್ಚರಿ ಪಟುಗಳಾದ ದೀಪಿಕಾ ಕುಮಾರಿ, ಆತನು ದಾಸ್ ಮತ್ತಿತರಿಗೆ ತರಬೇತಿ ನೀಡಿರುವ 49 ವರ್ಷದ ಧರ್ಮೇಂದ್ರ ಅವರಿಗೆ ಗುರುವಾರ ಮೆದುಳಿನ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ. ಸದ್ಯ ಅವರ ಆರೋಗ್ಯದ ಮೇಲೆ ವೈದ್ಯರು ನಿಗಾ ಇಟ್ಟಿದ್ದಾರೆ.</p>.<p>‘ಸರ್ (ಧರ್ಮೆಂದ್ರ ತಿವಾರಿ) ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ. ಶೇಕಡಾ ಎರಡರಷ್ಟು ಚೇತರಿಕೆ ಅವರಲ್ಲಿ ಕಾಣುತ್ತಿದೆ ಎಂದು ವೈದ್ಯರು ಹೇಳುತ್ತಿದ್ದಾರೆ‘ ಎಂದು ಭಾರತದ ಮಾಜಿ ಆರ್ಚರಿ ಆಟಗಾರರೊಬ್ಬರು ಹೇಳಿದ್ದಾರೆ.</p>.<p>ರಿಯೊ ಒಲಿಂಪಿಕ್ಸ್ನಲ್ಲಿ ಭಾರತ ತಂಡಕ್ಕೆ ತಿವಾರಿ ತರಬೇತಿ ನೀಡಿದ್ದರು. ಬುಧವಾರ ಬೆಳಿಗ್ಗೆ ಅವರಿಗೆ ಪಾರ್ಶ್ವವಾಯು ಬಾಧಿಸಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಸಿಟಿ ಸ್ಕ್ಯಾನ್ ಮೂಲಕ ತಿಳಿದುಬಂದಿತ್ತು.</p>.<p>1993ರಲ್ಲಿ ಆರ್ಚರಿ ಕ್ರೀಡೆಯಿಂದ ನಿವೃತ್ತರಾಗಿರುವ ತಿವಾರಿ, ನಂತರ ತರಬೇತಿಯತ್ತ ಮುಖ ಮಾಡಿದ್ದರು. ಜಾರ್ಖಂಡ್ನಲ್ಲಿ ಆರ್ಚರಿ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. 1996ರಿಂದ ಟಾಟಾ ಆರ್ಚರಿ ಅಕಾಡೆಮಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಶೆಡ್ಪುರ: </strong>ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ, ಭಾರತದ ಆರ್ಚರಿ ಕೋಚ್ ಧರ್ಮೇಂದ್ರ ತಿವಾರಿ ಅವರಿಗೆ ಪಾರ್ಶ್ವವಾಯು ಬಾಧಿಸಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.</p>.<p>ತಾರಾ ಆರ್ಚರಿ ಪಟುಗಳಾದ ದೀಪಿಕಾ ಕುಮಾರಿ, ಆತನು ದಾಸ್ ಮತ್ತಿತರಿಗೆ ತರಬೇತಿ ನೀಡಿರುವ 49 ವರ್ಷದ ಧರ್ಮೇಂದ್ರ ಅವರಿಗೆ ಗುರುವಾರ ಮೆದುಳಿನ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ. ಸದ್ಯ ಅವರ ಆರೋಗ್ಯದ ಮೇಲೆ ವೈದ್ಯರು ನಿಗಾ ಇಟ್ಟಿದ್ದಾರೆ.</p>.<p>‘ಸರ್ (ಧರ್ಮೆಂದ್ರ ತಿವಾರಿ) ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ. ಶೇಕಡಾ ಎರಡರಷ್ಟು ಚೇತರಿಕೆ ಅವರಲ್ಲಿ ಕಾಣುತ್ತಿದೆ ಎಂದು ವೈದ್ಯರು ಹೇಳುತ್ತಿದ್ದಾರೆ‘ ಎಂದು ಭಾರತದ ಮಾಜಿ ಆರ್ಚರಿ ಆಟಗಾರರೊಬ್ಬರು ಹೇಳಿದ್ದಾರೆ.</p>.<p>ರಿಯೊ ಒಲಿಂಪಿಕ್ಸ್ನಲ್ಲಿ ಭಾರತ ತಂಡಕ್ಕೆ ತಿವಾರಿ ತರಬೇತಿ ನೀಡಿದ್ದರು. ಬುಧವಾರ ಬೆಳಿಗ್ಗೆ ಅವರಿಗೆ ಪಾರ್ಶ್ವವಾಯು ಬಾಧಿಸಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಸಿಟಿ ಸ್ಕ್ಯಾನ್ ಮೂಲಕ ತಿಳಿದುಬಂದಿತ್ತು.</p>.<p>1993ರಲ್ಲಿ ಆರ್ಚರಿ ಕ್ರೀಡೆಯಿಂದ ನಿವೃತ್ತರಾಗಿರುವ ತಿವಾರಿ, ನಂತರ ತರಬೇತಿಯತ್ತ ಮುಖ ಮಾಡಿದ್ದರು. ಜಾರ್ಖಂಡ್ನಲ್ಲಿ ಆರ್ಚರಿ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. 1996ರಿಂದ ಟಾಟಾ ಆರ್ಚರಿ ಅಕಾಡೆಮಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>