ಇಸ್ತಾಂಬುಲ್ (ಪಿಟಿಐ): ವಿಶ್ವ ಒಲಿಂಪಿಕ್ ಗೇಮ್ಸ್ ಕ್ವಾಲಿಫೈಯರ್ನಲ್ಲಿ ಭಾನುವಾರ ಭಾರತದ ಕುಸ್ತಿಪಟುಗಳಾದ ಸುಜೀತ್ ಕಲ್ಕಲ್ ಮತ್ತು ಜೈದೀಪ್ ಅಹ್ಲಾವತ್ ಅವರು ತಮ್ಮ ವಿಭಾಗಗಳ ಸೆಮಿಫೈನಲ್ನಲ್ಲಿ ಸೋಲುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್ ಕೋಟಾ ಗಿಟ್ಟಿಸಲು ಸಾಧ್ಯವಾಗಲಿಲ್ಲ. ಆದರೆ, ಪುರುಷರ ವಿಭಾಗದಲ್ಲಿ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಅವರು ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಗಿಟ್ಟಿಸಿದ ಏಕೈಕ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು.