<p><strong>ಚೆನ್ನೈ</strong>: ಅರ್ಜುನ ಪ್ರಶಸ್ತಿ ಪುರಸ್ಕೃತ,ಮಾಜಿ ಟೇಬಲ್ ಟೆನಿಸ್ ಆಟಗಾರ ವಿ. ಚಂದ್ರಶೇಖರ್ (64) ಅವರು ಬುಧವಾರ ಕೋವಿಡ್ನಿಂದಾಗಿ ಮೃತಪಟ್ಟರು. ಅವರ ಕುಟುಂಬದ ಮೂಲಗಳು ಈ ವಿಷಯ ತಿಳಿಸಿವೆ. ಚಂದ್ರಶೇಖರ್ ಅವರಿಗೆ ಪತ್ನಿ ಮತ್ತು ಪುತ್ರ ಇದ್ದಾರೆ.</p>.<p>ಚಂದ್ರ ಎಂದೇ ಹೆಸರಾಗಿದ್ದ, ಮೂರು ಬಾರಿಯ ರಾಷ್ಟ್ರೀಯ ಚಾಂಪಿಯನ್ ಚಂದ್ರಶೇಖರ್, ತಮಿಳುನಾಡು ಟೇಬಲ್ ಟೆನಿಸ್ ಸಂಸ್ಥೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.</p>.<p>ಚೆನ್ನೈನಲ್ಲಿ ಜನಿಸಿದ್ದ ಚಂದ್ರಶೇಖರ್, 1982ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಸೆಮಿಫೈನಲ್ ತಲುಪಿದ್ದರು. ಕೋಚ್ ಆಗಿಯೂ ಯಶಸ್ಸು ಗಳಿಸಿದ್ದರು.</p>.<p>1984ರಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಅವರ ವೃತ್ತಿಜೀವನ ಅರ್ಧದಲ್ಲೇ ಮೊಟಕುಗೊಂಡಿತು. ಈ ಶಸ್ತ್ರಚಿಕಿತ್ಸೆಯಿಂದಾಗಿ ಅವರು ನಡೆದಾಡಲು ಕಷ್ಟಪಡಬೇಕಾಯಿತು. ಮಾತು ಹಾಗೂ ದೃಷ್ಟಿಯನ್ನೂ ಕಳೆದುಕೊಂಡಿದ್ದರು. ಕಷ್ಟಪಟ್ಟು ಚೇತರಿಸಿಕೊಂಡ ಬಳಿಕ ಕೋಚ್ ಆಗಿ ಕಾರ್ಯನಿರ್ವಹಿಸಿದರು. ಈ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಆಸ್ಪತ್ರೆಯ ವಿರುದ್ಧ ಕಾನೂನು ಹೋರಾಟ ನಡೆಸಿ ತಮ್ಮ ಪರವಾಗಿ ತೀರ್ಪು ಪಡೆದರು.</p>.<p>ಮೊಣಕಾಲು ಗಾಯವಾಗಿದ್ದ ಸಂದರ್ಭದಲ್ಲೇ ಅರ್ಥಶಾಸ್ತ್ರ ಹಾಗೂ ಕಾನೂನು ಪದವಿಯನ್ನು ಚಿನ್ನದ ಪದಕದೊಂದಿಗೆ ಪೂರ್ಣಗೊಳಿಸಿದ್ದರು. ತರುವಾಯ ಪೂರ್ಣಪ್ರಮಾಣದ ಇಚ್ಛಾಶಕ್ತಿಯ ಕಾರಣ ನಡೆದಾಡಲು ಆರಂಭಿಸಿದರು. ಭರವಸೆಯ ಆಟಗಾರರರಿಗೆ ತರಬೇತಿ ನೀಡುವತ್ತ ಗಮನ ಕೇಂದ್ರೀಕರಿಸಿದರು.</p>.<p>ಜಿ. ಸತ್ಯನ್, ಮಾಜಿ ರಾಷ್ಟ್ರೀಯ ಚಾಂಪಿಯನ್ಗಳಾದ ಎಸ್.ರಮಣ ಹಾಗೂ ಎಂ.ಎಸ್.ಮೈಥಿಲಿ ಅವರು ಚಂದ್ರಶೇಖರ್ ಅವರಿಂದ ತರಬೇತಿ ಪಡೆದವರಲ್ಲಿ ಪ್ರಮುಖರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಅರ್ಜುನ ಪ್ರಶಸ್ತಿ ಪುರಸ್ಕೃತ,ಮಾಜಿ ಟೇಬಲ್ ಟೆನಿಸ್ ಆಟಗಾರ ವಿ. ಚಂದ್ರಶೇಖರ್ (64) ಅವರು ಬುಧವಾರ ಕೋವಿಡ್ನಿಂದಾಗಿ ಮೃತಪಟ್ಟರು. ಅವರ ಕುಟುಂಬದ ಮೂಲಗಳು ಈ ವಿಷಯ ತಿಳಿಸಿವೆ. ಚಂದ್ರಶೇಖರ್ ಅವರಿಗೆ ಪತ್ನಿ ಮತ್ತು ಪುತ್ರ ಇದ್ದಾರೆ.</p>.<p>ಚಂದ್ರ ಎಂದೇ ಹೆಸರಾಗಿದ್ದ, ಮೂರು ಬಾರಿಯ ರಾಷ್ಟ್ರೀಯ ಚಾಂಪಿಯನ್ ಚಂದ್ರಶೇಖರ್, ತಮಿಳುನಾಡು ಟೇಬಲ್ ಟೆನಿಸ್ ಸಂಸ್ಥೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.</p>.<p>ಚೆನ್ನೈನಲ್ಲಿ ಜನಿಸಿದ್ದ ಚಂದ್ರಶೇಖರ್, 1982ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಸೆಮಿಫೈನಲ್ ತಲುಪಿದ್ದರು. ಕೋಚ್ ಆಗಿಯೂ ಯಶಸ್ಸು ಗಳಿಸಿದ್ದರು.</p>.<p>1984ರಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಅವರ ವೃತ್ತಿಜೀವನ ಅರ್ಧದಲ್ಲೇ ಮೊಟಕುಗೊಂಡಿತು. ಈ ಶಸ್ತ್ರಚಿಕಿತ್ಸೆಯಿಂದಾಗಿ ಅವರು ನಡೆದಾಡಲು ಕಷ್ಟಪಡಬೇಕಾಯಿತು. ಮಾತು ಹಾಗೂ ದೃಷ್ಟಿಯನ್ನೂ ಕಳೆದುಕೊಂಡಿದ್ದರು. ಕಷ್ಟಪಟ್ಟು ಚೇತರಿಸಿಕೊಂಡ ಬಳಿಕ ಕೋಚ್ ಆಗಿ ಕಾರ್ಯನಿರ್ವಹಿಸಿದರು. ಈ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಆಸ್ಪತ್ರೆಯ ವಿರುದ್ಧ ಕಾನೂನು ಹೋರಾಟ ನಡೆಸಿ ತಮ್ಮ ಪರವಾಗಿ ತೀರ್ಪು ಪಡೆದರು.</p>.<p>ಮೊಣಕಾಲು ಗಾಯವಾಗಿದ್ದ ಸಂದರ್ಭದಲ್ಲೇ ಅರ್ಥಶಾಸ್ತ್ರ ಹಾಗೂ ಕಾನೂನು ಪದವಿಯನ್ನು ಚಿನ್ನದ ಪದಕದೊಂದಿಗೆ ಪೂರ್ಣಗೊಳಿಸಿದ್ದರು. ತರುವಾಯ ಪೂರ್ಣಪ್ರಮಾಣದ ಇಚ್ಛಾಶಕ್ತಿಯ ಕಾರಣ ನಡೆದಾಡಲು ಆರಂಭಿಸಿದರು. ಭರವಸೆಯ ಆಟಗಾರರರಿಗೆ ತರಬೇತಿ ನೀಡುವತ್ತ ಗಮನ ಕೇಂದ್ರೀಕರಿಸಿದರು.</p>.<p>ಜಿ. ಸತ್ಯನ್, ಮಾಜಿ ರಾಷ್ಟ್ರೀಯ ಚಾಂಪಿಯನ್ಗಳಾದ ಎಸ್.ರಮಣ ಹಾಗೂ ಎಂ.ಎಸ್.ಮೈಥಿಲಿ ಅವರು ಚಂದ್ರಶೇಖರ್ ಅವರಿಂದ ತರಬೇತಿ ಪಡೆದವರಲ್ಲಿ ಪ್ರಮುಖರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>