‘ಈ ಹಿಂದೆ ನಮ್ಮ ರಾಜ್ಯವು ಹಲವಾರು ಅಂತರರಾಷ್ಟ್ರೀಯ ಅಥ್ಲೀಟ್ಗಳನ್ನು ದೇಶಕ್ಕೆ ಕೊಡುಗೆ ನೀಡಿದೆ. ಆದರೆ ಕಳೆದ ಒಂದೆರಡು ದಶಕಗಳಿಂದ ದೊಡ್ಡ ಸಾಧನೆಗಳು ಮೂಡಿ ಬರುತ್ತಿಲ್ಲ. ಆದರೆ, ಸಾಕಷ್ಟು ಪ್ರತಿಭಾವಂತರು ಇದ್ದಾರೆ. ಗ್ರಾಮೀಣ, ಪಟ್ಟಣ ಮತ್ತು ಮಹಾನಗರಗಳಲ್ಲಿರುವ ಪ್ರತಿಭಾವಂತರನ್ನು ಗುರುತಿಸುವ ಕಾರ್ಯಕ್ಕೆ ಒತ್ತು ನೀಡಲಾಗುವುದು. ಕಾರ್ಪೊರೆಟ್ ಸಂಸ್ಥೆಗಳು ಮತ್ತು ಆಸಕ್ತ ಸಂಸ್ಥೆಗಳ ನೆರವಿ ನೊಂದಿಗೆ ಕ್ರೀಡಾಪಟುಗಳಿಗೆ ಆಧುನಿಕ ರೀತಿಯ ಸವಲತ್ತುಗಳನ್ನು ನೀಡುವ ಯೋಜನೆ ಇದೆ’ ಎಂದು ತಿಳಿಸಿದ್ದಾರೆ.