<p><strong>ನವದೆಹಲಿ:</strong> ಭಾರತ ಬ್ಯಾಡ್ಮಿಂಟನ್ ಸಂಸ್ಥೆಯು (ಬಿಎಐ) ಜುಲೈ 1ರಿಂದ ಹೈದರಾಬಾದ್ನಲ್ಲಿ ತರಬೇತಿ ಶಿಬಿರವನ್ನು ಆಯೋಜಿಸಲು ಚಿಂತನೆ ನಡೆಸಿದೆ. ಒಂದೊಮ್ಮೆ ತೆಲಂಗಾಣ ಸರಕಾರ ತರಬೇತಿಗೆ ಹಸಿರು ನಿಶಾನೆ ತೋರಿದರೆ ಪಿ.ವಿ.ಸಿಂಧು ಸೇರಿದಂತೆ ಪ್ರಮುಖ ಅಥ್ಲೀಟುಗಳು ಅಭ್ಯಾಸದ ಅಂಗಣಕ್ಕೆ ಇಳಿಯಲಿದ್ದಾರೆ.</p>.<p>ಭಾರತ ಕ್ರೀಡಾ ಪ್ರಾಧಿಕಾರ ರೂಪಿಸಿರುವ ನಿಯಮದ ಪ್ರಕಾರಹೋದ ತಿಂಗಳು ಬೆಂಗಳೂರಿನ ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಒಂದಷ್ಟು ಆಟಗಾರರು ತರಬೇತಿ ನಡೆಸಿದ್ದರು. ಆದರೆ ಹೈದರಾಬಾದ್ಗೆ ಈ ಅದೃಷ್ಟ ಇರಲಿಲ್ಲ.</p>.<p>ಹೈದರಾಬಾದ್ನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣ ಸರಕಾರ ಜೂನ್ 30ರವರೆಗೆ ಲಾಕ್ಡೌನ್ ವಿಸ್ತರಿಸಿದೆ. ಅಲ್ಲಿಯವರೆಗೆ ನಗರದಲ್ಲಿ ಕ್ರೀಡಾ ಚಟುವಟಿಕೆಗಳು ನಡೆಯುತ್ತಿಲ್ಲ.</p>.<p>‘ಕೊರೊನಾ ಪಿಡುಗು ನಮ್ಮ ಆಟಗಾರರ ತರಬೇತಿಗೆ ತಡೆಯೊಡ್ಡಿದೆ. ಜುಲೈ1ರಿಂದ ಹೈದರಾಬಾದ್ನಲ್ಲಿ ತರಬೇತಿ ಶಿಬಿರ ಆಯೋಜಿಸಲು ನಿರ್ಧರಿಸಿದ್ದೇವೆ. ಇದಕ್ಕೆ ಅಲ್ಲಿಯ ರಾಜ್ಯ ಸರ್ಕಾರದ ಅನುಮತಿ ಬೇಕಿದೆ’ ಎಂದು ಬಿಎಐ ಕಾರ್ಯದರ್ಶಿ ಅಜಯ್ ಸಿಂಘಾನಿಯಾ ತಿಳಿಸಿದ್ದಾರೆ.</p>.<p>ಎಪ್ರಿಲ್ 27ರಿಂದ ಮೇ 3ರವರೆಗೆ ನಿಗದಿಯಾಗಿದ್ದ ರಾಷ್ಟ್ರೀಯ ಚಾಂಪಿಯನ್ಷಿಪ್ಅನ್ನುಕೋವಿಡ್ ಕಾರಣ ಬಿಎಐ ಮುಂದೂಡಿತ್ತು. ಸದ್ಯ ಸೆಪ್ಟೆಂಬರ್ವರೆಗೆ ಯಾವುದೇ ಸ್ಥಳೀಯ ಟೂರ್ನಿಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ.</p>.<p>‘ಕೋವಿಡ್ ಸೃಷ್ಟಿಸಿರುವ ಬಿಕ್ಕಟ್ಟಿನ ಕುರಿತು ಸೆಪ್ಟೆಂಬರ್ನಲ್ಲಿ ಪರಾಮರ್ಶೆ ನಡೆಸಿ ಮುಂದುವರಿಯುತ್ತೇವೆ’ ಎಂದು ಸಿಂಘಾನಿಯಾ ತಿಳಿಸಿದ್ದಾರೆ.</p>.<p>ಸ್ಥಳೀಯ ಮಟ್ಟದಲ್ಲಿ ವಿವಿಧ ಹಂತಗಳಲ್ಲಿ ಟೂರ್ನಿಗಳ ಸ್ವರೂಪವನ್ನು ಬದಲಿಸಲು ಬಿಎಐ ಫೆಬ್ರುವರಿಯಲ್ಲಿ ನಿರ್ಧರಿಸಿತ್ತು. ಸೀನಿಯರ್ ರ್ಯಾಂಕಿಂಗ್ ಟೂರ್ನಿಗಳ ಸ್ಥಾನದಲ್ಲಿ ಅಂದಾಜು ₹2 ಕೋಟಿ ಬಹುಮಾನ ಮೊತ್ತದ ಟೂರ್ನಿ ಆಯೋಜನೆಗೆ ಚಿಂತನೆ ನಡೆಸಿತ್ತು. ಆದರೆ ಕೋವಿಡ್ ಪ್ರಕರಣಗಳಲ್ಲಿ ಏರಿಕೆಯಾದ ಕಾರಣ ಈ ಚಿಂತನೆ ಬಲ ಕಳೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಬ್ಯಾಡ್ಮಿಂಟನ್ ಸಂಸ್ಥೆಯು (ಬಿಎಐ) ಜುಲೈ 1ರಿಂದ ಹೈದರಾಬಾದ್ನಲ್ಲಿ ತರಬೇತಿ ಶಿಬಿರವನ್ನು ಆಯೋಜಿಸಲು ಚಿಂತನೆ ನಡೆಸಿದೆ. ಒಂದೊಮ್ಮೆ ತೆಲಂಗಾಣ ಸರಕಾರ ತರಬೇತಿಗೆ ಹಸಿರು ನಿಶಾನೆ ತೋರಿದರೆ ಪಿ.ವಿ.ಸಿಂಧು ಸೇರಿದಂತೆ ಪ್ರಮುಖ ಅಥ್ಲೀಟುಗಳು ಅಭ್ಯಾಸದ ಅಂಗಣಕ್ಕೆ ಇಳಿಯಲಿದ್ದಾರೆ.</p>.<p>ಭಾರತ ಕ್ರೀಡಾ ಪ್ರಾಧಿಕಾರ ರೂಪಿಸಿರುವ ನಿಯಮದ ಪ್ರಕಾರಹೋದ ತಿಂಗಳು ಬೆಂಗಳೂರಿನ ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಒಂದಷ್ಟು ಆಟಗಾರರು ತರಬೇತಿ ನಡೆಸಿದ್ದರು. ಆದರೆ ಹೈದರಾಬಾದ್ಗೆ ಈ ಅದೃಷ್ಟ ಇರಲಿಲ್ಲ.</p>.<p>ಹೈದರಾಬಾದ್ನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣ ಸರಕಾರ ಜೂನ್ 30ರವರೆಗೆ ಲಾಕ್ಡೌನ್ ವಿಸ್ತರಿಸಿದೆ. ಅಲ್ಲಿಯವರೆಗೆ ನಗರದಲ್ಲಿ ಕ್ರೀಡಾ ಚಟುವಟಿಕೆಗಳು ನಡೆಯುತ್ತಿಲ್ಲ.</p>.<p>‘ಕೊರೊನಾ ಪಿಡುಗು ನಮ್ಮ ಆಟಗಾರರ ತರಬೇತಿಗೆ ತಡೆಯೊಡ್ಡಿದೆ. ಜುಲೈ1ರಿಂದ ಹೈದರಾಬಾದ್ನಲ್ಲಿ ತರಬೇತಿ ಶಿಬಿರ ಆಯೋಜಿಸಲು ನಿರ್ಧರಿಸಿದ್ದೇವೆ. ಇದಕ್ಕೆ ಅಲ್ಲಿಯ ರಾಜ್ಯ ಸರ್ಕಾರದ ಅನುಮತಿ ಬೇಕಿದೆ’ ಎಂದು ಬಿಎಐ ಕಾರ್ಯದರ್ಶಿ ಅಜಯ್ ಸಿಂಘಾನಿಯಾ ತಿಳಿಸಿದ್ದಾರೆ.</p>.<p>ಎಪ್ರಿಲ್ 27ರಿಂದ ಮೇ 3ರವರೆಗೆ ನಿಗದಿಯಾಗಿದ್ದ ರಾಷ್ಟ್ರೀಯ ಚಾಂಪಿಯನ್ಷಿಪ್ಅನ್ನುಕೋವಿಡ್ ಕಾರಣ ಬಿಎಐ ಮುಂದೂಡಿತ್ತು. ಸದ್ಯ ಸೆಪ್ಟೆಂಬರ್ವರೆಗೆ ಯಾವುದೇ ಸ್ಥಳೀಯ ಟೂರ್ನಿಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ.</p>.<p>‘ಕೋವಿಡ್ ಸೃಷ್ಟಿಸಿರುವ ಬಿಕ್ಕಟ್ಟಿನ ಕುರಿತು ಸೆಪ್ಟೆಂಬರ್ನಲ್ಲಿ ಪರಾಮರ್ಶೆ ನಡೆಸಿ ಮುಂದುವರಿಯುತ್ತೇವೆ’ ಎಂದು ಸಿಂಘಾನಿಯಾ ತಿಳಿಸಿದ್ದಾರೆ.</p>.<p>ಸ್ಥಳೀಯ ಮಟ್ಟದಲ್ಲಿ ವಿವಿಧ ಹಂತಗಳಲ್ಲಿ ಟೂರ್ನಿಗಳ ಸ್ವರೂಪವನ್ನು ಬದಲಿಸಲು ಬಿಎಐ ಫೆಬ್ರುವರಿಯಲ್ಲಿ ನಿರ್ಧರಿಸಿತ್ತು. ಸೀನಿಯರ್ ರ್ಯಾಂಕಿಂಗ್ ಟೂರ್ನಿಗಳ ಸ್ಥಾನದಲ್ಲಿ ಅಂದಾಜು ₹2 ಕೋಟಿ ಬಹುಮಾನ ಮೊತ್ತದ ಟೂರ್ನಿ ಆಯೋಜನೆಗೆ ಚಿಂತನೆ ನಡೆಸಿತ್ತು. ಆದರೆ ಕೋವಿಡ್ ಪ್ರಕರಣಗಳಲ್ಲಿ ಏರಿಕೆಯಾದ ಕಾರಣ ಈ ಚಿಂತನೆ ಬಲ ಕಳೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>