<p><strong>ನವದೆಹಲಿ:</strong> ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಭಾರತ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) ಇದೇ 23ರಿಂದ ತನ್ನ ಕಚೇರಿಯನ್ನು ಮುಚ್ಚಲಿದೆ. ಸಂಸ್ಥೆಯು ಶುಕ್ರವಾರ ಈ ವಿಷಯವನ್ನು ಪ್ರಕಟಿಸಿದೆ.</p>.<p>‘ಭಾರತ ಸರಕಾರ ಹಾಗೂ ಕ್ರೀಡಾ ಇಲಾಖೆಯು, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನೀಡಿರುವ ಸಲಹೆಗಳು ಹಾಗೂ ರಕ್ಷಣಾ ಕ್ರಮಗಳ ಅನ್ವಯ ಕಚೇರಿಯನ್ನು ಮಾರ್ಚ್ 23ರಿಂದ ಮುಚ್ಚಲಾಗುವುದು’ ಎಂದುಬಿಎಐ ಪ್ರಕಟಣೆ ತಿಳಿಸಿದೆ.</p>.<p>‘ಅಧಿಕಾರಿಗಳೊಂದಿಗೆ ಚರ್ಚಿಸಿ ಇದೇ ತಿಂಗಳ 31ಕ್ಕೆ ಪರಿಸ್ಥಿತಿಯನ್ನು ಮರು ಪರಿಶೀಲಿಸಿ ಹಾಗೂ ಸೂಕ್ತ ಕ್ರಮ ಕಂಡುಕೊಳ್ಳಲಾಗುವುದು. ಸಿಬ್ಬಂದಿಯ ಆರೋಗ್ಯ ನಮ್ಮ ಪ್ರಮುಖ ಆದ್ಯತೆಯಾಗಿದೆ’ ಎಂದು ಬಿಎಐ ಪ್ರಧಾನ ಕಾರ್ಯದರ್ಶಿ ಅಜಯ್ ಸಿಂಘಾನಿಯಾ ಹೇಳಿದ್ದಾರೆ.</p>.<p>ಎಲ್ಲ ಸಿಬ್ಬಂದಿಗೆ ಮನೆಯಿಂದಲೇ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ತುರ್ತುಸ್ಥಿತಿಯಲ್ಲಿ ಮಾತ್ರ ಕಚೇರಿಗೆ ತೆರಳಬಹುದು.</p>.<p>ಕೊರೊನಾ ಸೋಂಕಿನ ಕಾರಣದಿಂದಲೇ ಇದೇ 24ರಿಂದ ನವದೆಹಲಿಯಲ್ಲಿ ನಡೆಯಬೇಕಿದ್ದ ಇಂಡಿಯಾ ಓಪನ್ ಟೂರ್ನಿಯನ್ನು ಬಿಎಐ ರದ್ದು ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಭಾರತ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) ಇದೇ 23ರಿಂದ ತನ್ನ ಕಚೇರಿಯನ್ನು ಮುಚ್ಚಲಿದೆ. ಸಂಸ್ಥೆಯು ಶುಕ್ರವಾರ ಈ ವಿಷಯವನ್ನು ಪ್ರಕಟಿಸಿದೆ.</p>.<p>‘ಭಾರತ ಸರಕಾರ ಹಾಗೂ ಕ್ರೀಡಾ ಇಲಾಖೆಯು, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನೀಡಿರುವ ಸಲಹೆಗಳು ಹಾಗೂ ರಕ್ಷಣಾ ಕ್ರಮಗಳ ಅನ್ವಯ ಕಚೇರಿಯನ್ನು ಮಾರ್ಚ್ 23ರಿಂದ ಮುಚ್ಚಲಾಗುವುದು’ ಎಂದುಬಿಎಐ ಪ್ರಕಟಣೆ ತಿಳಿಸಿದೆ.</p>.<p>‘ಅಧಿಕಾರಿಗಳೊಂದಿಗೆ ಚರ್ಚಿಸಿ ಇದೇ ತಿಂಗಳ 31ಕ್ಕೆ ಪರಿಸ್ಥಿತಿಯನ್ನು ಮರು ಪರಿಶೀಲಿಸಿ ಹಾಗೂ ಸೂಕ್ತ ಕ್ರಮ ಕಂಡುಕೊಳ್ಳಲಾಗುವುದು. ಸಿಬ್ಬಂದಿಯ ಆರೋಗ್ಯ ನಮ್ಮ ಪ್ರಮುಖ ಆದ್ಯತೆಯಾಗಿದೆ’ ಎಂದು ಬಿಎಐ ಪ್ರಧಾನ ಕಾರ್ಯದರ್ಶಿ ಅಜಯ್ ಸಿಂಘಾನಿಯಾ ಹೇಳಿದ್ದಾರೆ.</p>.<p>ಎಲ್ಲ ಸಿಬ್ಬಂದಿಗೆ ಮನೆಯಿಂದಲೇ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ತುರ್ತುಸ್ಥಿತಿಯಲ್ಲಿ ಮಾತ್ರ ಕಚೇರಿಗೆ ತೆರಳಬಹುದು.</p>.<p>ಕೊರೊನಾ ಸೋಂಕಿನ ಕಾರಣದಿಂದಲೇ ಇದೇ 24ರಿಂದ ನವದೆಹಲಿಯಲ್ಲಿ ನಡೆಯಬೇಕಿದ್ದ ಇಂಡಿಯಾ ಓಪನ್ ಟೂರ್ನಿಯನ್ನು ಬಿಎಐ ರದ್ದು ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>