ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಮಿನಲ್‌ ಮಾನಹಾನಿ ಪ್ರಕರಣ: ಕುಸ್ತಿಪಟು ಬಜರಂಗ್‌ ಪೂನಿಯಾ ಜಾಮೀನು

Published 9 ನವೆಂಬರ್ 2023, 10:35 IST
Last Updated 9 ನವೆಂಬರ್ 2023, 10:35 IST
ಅಕ್ಷರ ಗಾತ್ರ

ನವದೆಹಲಿ: ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಕುಸ್ತಿಪಟು ಬಜರಂಗ್ ಪೂನಿಯಾ ಅವರಿಗೆ ದೆಹಲಿಯ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ. ಬಜರಂಗ್‌ ಅವರು ತಮ್ಮ ವ್ಯಕ್ತಿತ್ವಕ್ಕೆ ಕಳಂಕ ತರುವಂಥ ಆರೋಪ ಮಾಡಿದ್ದರು ಎಂದು ಅವರ ವಿರುದ್ಧ ಕುಸ್ತಿ ತರಬೇತುದಾರ ನರೇಶ್ ದಹಿಯಾ ಅವರು ಮಾನಹಾನಿ ಪ್ರಕರಣ ದಾಖಲಿಸಿದ್ದರು.

ಭಾರತ ಕುಸ್ತಿ ಫೆಡರೇಷನ್ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಏಳು ಮಂದಿ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದು ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೆಲ ತಿಂಗಳ ಹಿಂದೆ ದೇಶದ ಪ್ರಮುಖ ಮಹಿಳಾ ಕುಸ್ತಿಪಟುಗಳು ದೆಹಲಿಯ ಜಂತರ್‌ಮಂಥರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಮಾತನಾಡುವಾಗ, ‘ಪ್ರತಿಭಟನೆ ವಿರೋಧಿಸಲು ದಹಿಯಾ ಅವರಿಗೇ ವಿಶ್ವಾಸಾರ್ಹತೆ ಇಲ್ಲ.  ಅವರೇ ಅತ್ಯಾಚಾರ ಪ್ರಕರಣ ಎದುರಿಸುತ್ತಿದ್ದಾರೆ’ ಎಂದು ಬಜರಂಗ್‌ ಹೇಳಿದ್ದರು. ಇದರ ವಿರುದ್ಧ ದಹಿಯಾ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

ವಿಚಾರಣೆ ವೇಳೆ ಖುದ್ದು ಹಾಜರಿಗೆ ವಿನಾಯಿತಿ ಕೋರಿದ್ದ ಬಜರಂಗ್ ಅವರು ಮೊದಲ ಮೂರು ಕಲಾಪಗಳಲ್ಲಿ ಹಾಜರಿರಲಿಲ್ಲ. ಅವರು ಗುರುವಾರ ಹಾಜರಾಗಿದ್ದಾರೆ. ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್‌ 5ಕ್ಕೆ ಮುಂದೂಡಿದೆ’ ಎಂದು ದಹಿಯಾ ಪರ ವಕೀಲ ರಾಜೇಶ್ ಕುಮಾರ್‌ ರೆಕ್ಸ್‌ವಾಲ್ ಪಿಟಿಐಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT