<p><strong>ನವದೆಹಲಿ</strong>: ಭಾರತ ಕುಸ್ತಿ ಫೆಡರೇಷನ್ ಇದೇ 10 ಮತ್ತು 11ರಂದು ಆಯೋಜಿಸಿರುವ ರಾಷ್ಟ್ರೀಯ ತಂಡಕ್ಕಾಗಿ ಆಯ್ಕೆ ಟ್ರಯಲ್ಸ್ನಲ್ಲಿ ಭಾಗವಹಿಸುವುದಿಲ್ಲ ಎಂದು ಒಲಿಂಪಿಯನ್ ಕುಸ್ತಿಪಟು ಬಜರಂಗ್ ಪೂನಿಯಾ ಹೇಳಿದ್ದಾರೆ. ಆಯ್ಕೆ ಪ್ರಕ್ರಿಯೆ ನಡೆಸದಂತೆ ದೆಹಲಿ ಹೈಕೋರ್ಟ್ನಲ್ಲಿ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.</p>.<p>ಬಜರಂಗ್, ವಿನೇಶಾ ಫೋಗಾಟ್, ಸಾಕ್ಷಿ ಮಲಿಕ್ ಮತ್ತು ಸತ್ಯವ್ರತ್ ಕಡಿಯಾನ್ ಅವರು ಸೇರಿ ಜಂಟಿಯಾಗಿ ನ್ಯಾಯಾಯಲ್ಲಿ ಅರ್ಜಿ ಸಲ್ಲಿಸಿದ್ದಾರೆಂದು ಮೂಲಗಳು ತಿಳಿಸಿವೆ. </p>.<p>ಆದರೆ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವ ಕುರಿತು ಬಜರಂಗ್ ಖಚಿತಪಡಿಸಿಲ್ಲ. </p>.<p>ಕಿರ್ಗಿಸ್ತಾನದಲ್ಲಿ ನಡೆಯಲಿರುವ ಏಷ್ಯನ್ ಕುಸ್ತಿ ಚಾಂಪಿಯನ್ಷಿಪ್ ಒಲಿಂಪಿಕ್ ಕ್ವಾಲಿಫೈಯರ್ ನಲ್ಲಿ ಆಡುವ ತಂಡವನ್ನು ಡಬ್ಲ್ಯುಎಫ್ಐ ಅಯ್ಕೆ ಟ್ರಯಲ್ಸ್ ಮೂಲಕ ನಿರ್ಧರಿಸಲಾಗುವುದು. ಆದರೆ, ಸದ್ಯ ಬಜರಂಗ್ ಅವರು ರಷ್ಯಾದಲ್ಲಿದ್ದಾರೆ. </p>.<p>‘ನಾನು ಟ್ರಯಲ್ಸ್ನಲ್ಲಿ ಭಾಗವಹಿಸದಿದ್ದರೆ ತರಬೇತಿಗಾಗಿ ವ್ಯಯಿಸಿದ ₹ 30 ಲಕ್ಷ ವ್ಯರ್ಥವಾಗಬಹುದು. ಆದರೆ ಅಮಾನತುಗೊಂಡಿರುವ ಡಬ್ಲ್ಯುಎಫ್ಐ ಟ್ರಯಲ್ಸ್ ಆಯೋಜಿಸುತ್ತಿರುವುದು ಯಾಕೆ? ಸರ್ಕಾರ ಯಾಕೆ ಮೌನವಾಗಿದೆ? ಅಡ್ಹಾಕ್ ಸಮಿತಿಯು ಟ್ರಯಲ್ಸ್ ಆಯೋಜನೆ ಮಾಡಿದ್ದರೆ ನಾವು ಸ್ಪರ್ಧಿಸುತ್ತಿದ್ದೆವು’ ಎಂದು ಬಜರಂಗ್ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತ ಕುಸ್ತಿ ಫೆಡರೇಷನ್ ಇದೇ 10 ಮತ್ತು 11ರಂದು ಆಯೋಜಿಸಿರುವ ರಾಷ್ಟ್ರೀಯ ತಂಡಕ್ಕಾಗಿ ಆಯ್ಕೆ ಟ್ರಯಲ್ಸ್ನಲ್ಲಿ ಭಾಗವಹಿಸುವುದಿಲ್ಲ ಎಂದು ಒಲಿಂಪಿಯನ್ ಕುಸ್ತಿಪಟು ಬಜರಂಗ್ ಪೂನಿಯಾ ಹೇಳಿದ್ದಾರೆ. ಆಯ್ಕೆ ಪ್ರಕ್ರಿಯೆ ನಡೆಸದಂತೆ ದೆಹಲಿ ಹೈಕೋರ್ಟ್ನಲ್ಲಿ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.</p>.<p>ಬಜರಂಗ್, ವಿನೇಶಾ ಫೋಗಾಟ್, ಸಾಕ್ಷಿ ಮಲಿಕ್ ಮತ್ತು ಸತ್ಯವ್ರತ್ ಕಡಿಯಾನ್ ಅವರು ಸೇರಿ ಜಂಟಿಯಾಗಿ ನ್ಯಾಯಾಯಲ್ಲಿ ಅರ್ಜಿ ಸಲ್ಲಿಸಿದ್ದಾರೆಂದು ಮೂಲಗಳು ತಿಳಿಸಿವೆ. </p>.<p>ಆದರೆ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವ ಕುರಿತು ಬಜರಂಗ್ ಖಚಿತಪಡಿಸಿಲ್ಲ. </p>.<p>ಕಿರ್ಗಿಸ್ತಾನದಲ್ಲಿ ನಡೆಯಲಿರುವ ಏಷ್ಯನ್ ಕುಸ್ತಿ ಚಾಂಪಿಯನ್ಷಿಪ್ ಒಲಿಂಪಿಕ್ ಕ್ವಾಲಿಫೈಯರ್ ನಲ್ಲಿ ಆಡುವ ತಂಡವನ್ನು ಡಬ್ಲ್ಯುಎಫ್ಐ ಅಯ್ಕೆ ಟ್ರಯಲ್ಸ್ ಮೂಲಕ ನಿರ್ಧರಿಸಲಾಗುವುದು. ಆದರೆ, ಸದ್ಯ ಬಜರಂಗ್ ಅವರು ರಷ್ಯಾದಲ್ಲಿದ್ದಾರೆ. </p>.<p>‘ನಾನು ಟ್ರಯಲ್ಸ್ನಲ್ಲಿ ಭಾಗವಹಿಸದಿದ್ದರೆ ತರಬೇತಿಗಾಗಿ ವ್ಯಯಿಸಿದ ₹ 30 ಲಕ್ಷ ವ್ಯರ್ಥವಾಗಬಹುದು. ಆದರೆ ಅಮಾನತುಗೊಂಡಿರುವ ಡಬ್ಲ್ಯುಎಫ್ಐ ಟ್ರಯಲ್ಸ್ ಆಯೋಜಿಸುತ್ತಿರುವುದು ಯಾಕೆ? ಸರ್ಕಾರ ಯಾಕೆ ಮೌನವಾಗಿದೆ? ಅಡ್ಹಾಕ್ ಸಮಿತಿಯು ಟ್ರಯಲ್ಸ್ ಆಯೋಜನೆ ಮಾಡಿದ್ದರೆ ನಾವು ಸ್ಪರ್ಧಿಸುತ್ತಿದ್ದೆವು’ ಎಂದು ಬಜರಂಗ್ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>