ಕಡೇಶ್ವಾಲ್ಯ ಪೆರ್ಲಾಪು ಗಾಣದಮನೆಯ ದಿವಂಗತ ವಿಶ್ವನಾಥ ಸಪಲ್ಯ ಮತ್ತು ರೇವತಿ ದಂಪತಿ ಜಯಲಕ್ಷ್ಮಿ, ಕಡೇಶ್ವಾಲ್ಯದ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಕಲಿತವರು. ಪಿಯುಸಿ ಓದಲು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಪ್ರವೇಶ ಪಡೆದು, ಇದೇ ಸಂಸ್ಥೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿ, ವಿದ್ಯಾರ್ಥಿಗಳಿಗೆ ಬಾಲ್ ಬ್ಯಾಡ್ಮಿಂಟನ್ ತರಬೇತಿ ನೀಡುತ್ತಿದ್ದಾರೆ.