‘ಮುಖ್ಯಮಂತ್ರಿ ಅವರ ಬೇಡಿಕೆಗಳಿಗೆ ತಾತ್ವಿಕ ಒಪ್ಪಿಗೆ ನೀಡಿದ್ದೇವೆ. ರೇಸ್ಕೋರ್ಸ್ಅನ್ನು ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಕೇಳಿಕೊಂಡಿದ್ದಾರೆ. ಶೀಘ್ರದಲ್ಲೇ ಪರ್ಯಾಯ ಸ್ಥಳವನ್ನು ಕಂಡುಕೊಳ್ಳುವುದಾಗಿ ಅವರಿಗೆ ಭರವಸೆ ನೀಡಿದ್ದೇವೆ. ಸುಪ್ರೀಂ ಕೋರ್ಟ್ನಲ್ಲಿರುವ ಪ್ರಕರಣ ವಾಪಸ್ ಪಡೆಯುವ ಸಂಬಂಧ ಅಡ್ವೊಕೇಟ್ ಜನರಲ್ ಜತೆ ಮಾತುಕತೆ ನಡೆಸುತ್ತೇವೆ’ ಎಂದು ಬಿಟಿಸಿ ಮೂಲಗಳು ಹೇಳಿವೆ.