<p><strong>ಬೆಂಗಳೂರು</strong>: ದಕ್ಷಿಣ ಕನ್ನಡ ಜಿಲ್ಲೆಯ ಪ್ರಶಾಂತ್ ಜೆ. ನಾಯಕ್ ಅವರು ಭಾನುವಾರ ನಗರದಲ್ಲಿ ಮುಕ್ತಾಯಗೊಂಡ ಕರ್ನಾಟಕ ರಾಜ್ಯ ಅಮೆಚೂರ್ (2000 ರೇಟಿಂಗ್ ಒಳಗಿನವರ) ಚೆಸ್ ಚಾಂಪಿಯನ್ಷಿಪ್ನಲ್ಲಿ ಪ್ರಶಸ್ತಿ ಗೆದ್ದುಕೊಂಡರು.</p>.<p>ಕಾಟಂನಲ್ಲೂರಿನ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ಈ ಮೂರು ದಿನಗಳ ಕೂಟದಲ್ಲಿ ಅವರು 9 ಸುತ್ತುಗಳಿಂದ 8 ಪಾಯಿಂಟ್ಸ್ ಕಲೆಹಾಕಿದರು. ಬೆಂಗಳೂರಿನ ವಿಧು ತೋಟ ಮತ್ತು ದಕ್ಷಿಣ ಕನ್ನಡದ ಆಟಗಾರ್ತಿ ಆರುಷಿ ಹೆಲೆನ್ ಡಿಸಿಲ್ವ ಸಹ 8 ಪಾಯಿಂಟ್ಸ್ ಕಲೆಹಾಕಿದರೂ ಟೈಬ್ರೇಕ್ ಆಧಾರದಲ್ಲಿ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದರು.</p>.<p>ಬೆಂಗಳೂರಿನ ಇಂದ್ರಜಿತ್ ಮಜುಂದಾರ್ ಮತ್ತು ದಿಗ್ವಿಜಯ್ ಸುನೀಲ್ (ತಲಾ 7.5) ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದರು.</p>.<p>ಬೆಂಗಳೂರು ಗ್ರಾಮೀಣ ಜಿಲ್ಲಾ ಚೆಸ್ ಸಂಸ್ಥೆ ಆಶ್ರಯದಲ್ಲಿ ನಡೆದ ಟೂರ್ನಿಯಲ್ಲಿ 457 ಮಂದಿ ಭಾಗವಹಿಸಿದ್ದು 246 ಮಂದಿ ರೇಟಿಂಗ್ ಪಡೆದಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-4-839198494</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದಕ್ಷಿಣ ಕನ್ನಡ ಜಿಲ್ಲೆಯ ಪ್ರಶಾಂತ್ ಜೆ. ನಾಯಕ್ ಅವರು ಭಾನುವಾರ ನಗರದಲ್ಲಿ ಮುಕ್ತಾಯಗೊಂಡ ಕರ್ನಾಟಕ ರಾಜ್ಯ ಅಮೆಚೂರ್ (2000 ರೇಟಿಂಗ್ ಒಳಗಿನವರ) ಚೆಸ್ ಚಾಂಪಿಯನ್ಷಿಪ್ನಲ್ಲಿ ಪ್ರಶಸ್ತಿ ಗೆದ್ದುಕೊಂಡರು.</p>.<p>ಕಾಟಂನಲ್ಲೂರಿನ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ಈ ಮೂರು ದಿನಗಳ ಕೂಟದಲ್ಲಿ ಅವರು 9 ಸುತ್ತುಗಳಿಂದ 8 ಪಾಯಿಂಟ್ಸ್ ಕಲೆಹಾಕಿದರು. ಬೆಂಗಳೂರಿನ ವಿಧು ತೋಟ ಮತ್ತು ದಕ್ಷಿಣ ಕನ್ನಡದ ಆಟಗಾರ್ತಿ ಆರುಷಿ ಹೆಲೆನ್ ಡಿಸಿಲ್ವ ಸಹ 8 ಪಾಯಿಂಟ್ಸ್ ಕಲೆಹಾಕಿದರೂ ಟೈಬ್ರೇಕ್ ಆಧಾರದಲ್ಲಿ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದರು.</p>.<p>ಬೆಂಗಳೂರಿನ ಇಂದ್ರಜಿತ್ ಮಜುಂದಾರ್ ಮತ್ತು ದಿಗ್ವಿಜಯ್ ಸುನೀಲ್ (ತಲಾ 7.5) ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದರು.</p>.<p>ಬೆಂಗಳೂರು ಗ್ರಾಮೀಣ ಜಿಲ್ಲಾ ಚೆಸ್ ಸಂಸ್ಥೆ ಆಶ್ರಯದಲ್ಲಿ ನಡೆದ ಟೂರ್ನಿಯಲ್ಲಿ 457 ಮಂದಿ ಭಾಗವಹಿಸಿದ್ದು 246 ಮಂದಿ ರೇಟಿಂಗ್ ಪಡೆದಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-4-839198494</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>