ರಾಜಾ ಅಧೇರಿ ಕನ್ಸಲ್ಟೆಂಟ್ಸ್ ಸಂಸ್ಥೆಯ ವಿರುದ್ಧ ಸಿಬಿಐ ಈ ಹಿಂದೆ ಪ್ರಥಮ ವರ್ತಮಾನ ವರದಿ ದಾಖಲಿಸಿತ್ತು. ನಿರ್ದೇಶಕ ರಾಜಾ ಅಧೇರಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಉದಯಶಂಕರ್ ಭಟ್ ತಪ್ಪಿತಸ್ಥರು ಎಂದುವಿಚಾರಣಾ ನ್ಯಾಯಾಲಯ ಆದೇಶ ನೀಡಿತ್ತು. ಇದೇ ರೀತಿಯ ಮತ್ತೊಂದು ಪ್ರಕರಣದಲ್ಲಿ ಜೂನ್ ತಿಂಗಳಲ್ಲಿ ಈ ಸಂಸ್ಥೆಯ ₹ 94.24 ಲಕ್ಷ ಮೌಲ್ಯದ ಆಸ್ತಿ ಜಪ್ತಿಗೆ ಇ.ಡಿ ಮುಂದಾಗಿತ್ತು.