‘ವಿಶ್ವ ರ್ಯಾಂಕಿಂಗ್ನಲ್ಲಿ ನಾವು ಐದನೇ ಸ್ಥಾನದಲ್ಲಿದ್ದೇವೆ. ಹಿಂದಿನ ಬಾರಿ ಏಷ್ಯನ್ ಕ್ರೀಡಾಕೂಟದಲ್ಲಿ ಚಾಂಪಿಯನ್ ಆಗಿದ್ದೆವು. ಹೀಗಾಗಿ ನಮ್ಮ ಮೇಲೆ ನಿರೀಕ್ಷೆ ಹೆಚ್ಚಿತ್ತು. ಆದರೆ, ಸೆಮಿಫೈನಲ್ನಲ್ಲಿ ಆದ ಆಘಾತ ನಿಜಕ್ಕೂ ನೋವುಂಟು ಮಾಡಿದೆ. ಈ ವರ್ಷದಲ್ಲಿ ನಮ್ಮ ತಂಡ ಅತ್ಯುತ್ತಮ ಸಾಮರ್ಥ್ಯ ಮೆರೆದಿದೆ. ಕಂಚಿನ ಪದಕದಿಂದ ಸಮಾಧಾನವಿಲ್ಲ’ ಎಂದು ಶ್ರೀಜೇಶ್ ಅಭಿಪ್ರಾಯಪಟ್ಟಿದ್ದಾರೆ.