ಭಾರತ ಆರ್ಚರಿ ಸಂಸ್ಥೆ ಅಮಾನತುಗೊಂಡಿರುವ ಕಾರಣ, ಟ್ರಯಲ್ಸ್ನಲ್ಲಿ ಭಾಗವಹಿಸುತ್ತಿರುವ ದೀಪಿಕಾ ಕುಮಾರಿ, ಅತನು ದಾಸ್ ಮತ್ತು ಬೊಂಬಯಲಾ ದೇವಿ ಅವರು ತಾವೇ ಊಟ ಮತ್ತು ವಸತಿ ವೆಚ್ಚವನ್ನು ಭರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇವರು ರಾಷ್ಟ್ರೀಯ ತರಬೇತಿ ಶಿಬಿರಕ್ಕೂ ಆಯ್ಕೆಯಾಗಿದ್ದರು. ಈ ಕುರಿತು ಕೆಲ ಪತ್ರಿಕೆಗಳು ಸುದ್ದಿ ಮಾಡಿದ್ದವು.