<p><strong>ದಾವಣಗೆರೆ</strong>: ಆತಿಥೇಯ ದಾವಣಗೆರೆ, ಮಂಗಳೂರು, ಬೆಂಗಳೂರು ಉತ್ತರ ಮತ್ತು ಕ್ಯಾಲಿಕಟ್ ವಿಶ್ವವಿದ್ಯಾಲಯದ ಪುರುಷರ ತಂಡಗಳು ಅಖಿಲ ಭಾರತ ಅಂತರ ವಿಶ್ವವಿದ್ಯಾಲಯಗಳ ಕೊಕ್ಕೊ ಟೂರ್ನಿಗೆ ಅರ್ಹತೆ ಪಡೆದಿವೆ.</p>.<p>ದಾವಣಗೆರೆ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಟೂರ್ನಿಯಲ್ಲಿ ಒಟ್ಟು 89 ತಂಡಗಳು ಪಾಲ್ಗೊಂಡಿದ್ದವು. ಈ ಪೈಕಿ ಎಂಟು ತಂಡಗಳು ಅರ್ಹತಾ ಹಂತ ಪ್ರವೇಶಿಸಿದ್ದವು. ಇದರಲ್ಲಿ ಗೆದ್ದಿರುವ ದಾವಣಗೆರೆ, ಮಂಗಳೂರು, ಬೆಂಗಳೂರು ಉತ್ತರ ಮತ್ತು ಕ್ಯಾಲಿಕಟ್ ತಂಡಗಳು ಈಗ ಲೀಗ್ ಹಂತದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಅಗ್ರ ನಾಲ್ಕು ಸ್ಥಾನಗಳಿಗಾಗಿ ಪೈಪೋಟಿ ನಡೆಸಲಿವೆ.</p>.<p>ವಿ.ವಿ.ಆವರಣದ ಅಂಗಳದಲ್ಲಿ ಶನಿವಾರ ನಡೆದ ಅರ್ಹತಾ ಹಂತದ ಪಂದ್ಯದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ 13–11 ಪಾಯಿಂಟ್ಸ್ನಿಂದ ಮದ್ರಾಸ್ ವಿಶ್ವವಿದ್ಯಾಲಯ ತಂಡವನ್ನು ಮಣಿಸಿತು. ಆತಿಥೇಯ ತಂಡದ ಟಿ. ಹುಲಗಪ್ಪ ಮತ್ತು ಜೆ.ಜಿ.ಶರತ್ ಉತ್ತಮ ಆಟ ಆಡಿದರು. </p>.<p>ರೋಚಕತೆಯೊಂದಿಗೆ ಸಾಗಿದ್ದ ಮತ್ತೊಂದು ಪಂದ್ಯದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ 16–15ರಿಂದ ಕೊಯಮತ್ತೂರಿನ ಭಾರತೀಯಾರ್ ವಿ.ವಿ.ತಂಡದ ವಿರುದ್ಧ ಗೆದ್ದಿತು. ಐವಾನ್ ಪಾಷಾ 6 ಅಂಕ ಗಳಿಸಿ ತಂಡದ ಜಯದಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. </p>.<p>ಮಂಗಳೂರು ವಿಶ್ವವಿದ್ಯಾಲಯ ತಂಡವು ಮೈಸೂರು ವಿ.ವಿ ವಿರುದ್ಧದ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಈ ತಂಡ 14–4ರಿಂದ ವಿಜಯಿಯಾಯಿತು. ಅಭಿಜಿತ್ ಮತ್ತು ನಿಖಿಲ್ ಉತ್ತಮ ಸಾಮರ್ಥ್ಯ ತೋರಿದರು. ಕ್ಯಾಲಿಕಟ್ ವಿಶ್ವವಿದ್ಯಾಲಯವು 18–16ರಿಂದ ಕೇರಳ ವಿಶ್ವವಿದ್ಯಾಲಯ ತಂಡವನ್ನು ಸೋಲಿಸಿತು. </p>.<p>ಅಖಿಲ ಭಾರತ ಟೂರ್ನಿ ಏಪ್ರಿಲ್ 12 ರಿಂದ 16ರವರೆಗೆ ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ಛತ್ರಪತಿ ಸಾಹೂಜಿ ಮಹಾರಾಜ್ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಆತಿಥೇಯ ದಾವಣಗೆರೆ, ಮಂಗಳೂರು, ಬೆಂಗಳೂರು ಉತ್ತರ ಮತ್ತು ಕ್ಯಾಲಿಕಟ್ ವಿಶ್ವವಿದ್ಯಾಲಯದ ಪುರುಷರ ತಂಡಗಳು ಅಖಿಲ ಭಾರತ ಅಂತರ ವಿಶ್ವವಿದ್ಯಾಲಯಗಳ ಕೊಕ್ಕೊ ಟೂರ್ನಿಗೆ ಅರ್ಹತೆ ಪಡೆದಿವೆ.</p>.<p>ದಾವಣಗೆರೆ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಟೂರ್ನಿಯಲ್ಲಿ ಒಟ್ಟು 89 ತಂಡಗಳು ಪಾಲ್ಗೊಂಡಿದ್ದವು. ಈ ಪೈಕಿ ಎಂಟು ತಂಡಗಳು ಅರ್ಹತಾ ಹಂತ ಪ್ರವೇಶಿಸಿದ್ದವು. ಇದರಲ್ಲಿ ಗೆದ್ದಿರುವ ದಾವಣಗೆರೆ, ಮಂಗಳೂರು, ಬೆಂಗಳೂರು ಉತ್ತರ ಮತ್ತು ಕ್ಯಾಲಿಕಟ್ ತಂಡಗಳು ಈಗ ಲೀಗ್ ಹಂತದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಅಗ್ರ ನಾಲ್ಕು ಸ್ಥಾನಗಳಿಗಾಗಿ ಪೈಪೋಟಿ ನಡೆಸಲಿವೆ.</p>.<p>ವಿ.ವಿ.ಆವರಣದ ಅಂಗಳದಲ್ಲಿ ಶನಿವಾರ ನಡೆದ ಅರ್ಹತಾ ಹಂತದ ಪಂದ್ಯದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ 13–11 ಪಾಯಿಂಟ್ಸ್ನಿಂದ ಮದ್ರಾಸ್ ವಿಶ್ವವಿದ್ಯಾಲಯ ತಂಡವನ್ನು ಮಣಿಸಿತು. ಆತಿಥೇಯ ತಂಡದ ಟಿ. ಹುಲಗಪ್ಪ ಮತ್ತು ಜೆ.ಜಿ.ಶರತ್ ಉತ್ತಮ ಆಟ ಆಡಿದರು. </p>.<p>ರೋಚಕತೆಯೊಂದಿಗೆ ಸಾಗಿದ್ದ ಮತ್ತೊಂದು ಪಂದ್ಯದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ 16–15ರಿಂದ ಕೊಯಮತ್ತೂರಿನ ಭಾರತೀಯಾರ್ ವಿ.ವಿ.ತಂಡದ ವಿರುದ್ಧ ಗೆದ್ದಿತು. ಐವಾನ್ ಪಾಷಾ 6 ಅಂಕ ಗಳಿಸಿ ತಂಡದ ಜಯದಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. </p>.<p>ಮಂಗಳೂರು ವಿಶ್ವವಿದ್ಯಾಲಯ ತಂಡವು ಮೈಸೂರು ವಿ.ವಿ ವಿರುದ್ಧದ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಈ ತಂಡ 14–4ರಿಂದ ವಿಜಯಿಯಾಯಿತು. ಅಭಿಜಿತ್ ಮತ್ತು ನಿಖಿಲ್ ಉತ್ತಮ ಸಾಮರ್ಥ್ಯ ತೋರಿದರು. ಕ್ಯಾಲಿಕಟ್ ವಿಶ್ವವಿದ್ಯಾಲಯವು 18–16ರಿಂದ ಕೇರಳ ವಿಶ್ವವಿದ್ಯಾಲಯ ತಂಡವನ್ನು ಸೋಲಿಸಿತು. </p>.<p>ಅಖಿಲ ಭಾರತ ಟೂರ್ನಿ ಏಪ್ರಿಲ್ 12 ರಿಂದ 16ರವರೆಗೆ ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ಛತ್ರಪತಿ ಸಾಹೂಜಿ ಮಹಾರಾಜ್ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>