‘ದೇಶದ ಹಿತಾಸಕ್ತಿಯನ್ನು ಪರಿಗಣಿಸಿ ಮತ್ತು ದೇಶದೆಲ್ಲೆಡೆಯ ಕ್ರೀಡಾಪಟುಗಳನ್ನು ಗಮನದಲ್ಲಿರಿಸಿ ನಿಯಮಗಳಿಗೆ ಅನುಗುಣವಾಗಿ ಆಯ್ಕೆ ಟ್ರಯಲ್ಸ್ ನಡೆಸಲಾಗುತ್ತದೆ. ಈ ವಿಷಯದಲ್ಲಿ ಅರ್ಜಿದಾರರನ್ನು ಉದ್ದೇಶಪೂರ್ವಕವಾಗಿ ಟ್ರಯಲ್ಸ್ನಿಂದ ಕೈಬಿಡಲಾಗಿದೆ ಎಂಬ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆಯಾಗುವಂಥ ಅಂಶ ಅರ್ಜಿಯಲ್ಲಿಲ್ಲ. ಆಯ್ಕೆ ಪ್ರಕ್ರಿಯೆಯಲ್ಲಿ ಪಕ್ಷಪಾತ ನಡೆದಿದೆ ಎಂಬ ಅಂಶವೂ ಇಲ್ಲ ಎಂಬುದು ಕೋರ್ಟ್ನ ಅಭಿಪ್ರಾಯ’ ಎಂದು ನ್ಯಾ. ಪ್ರಸಾದ್ ಆದೇಶದಲ್ಲಿ ತಿಳಿಸಿದ್ದಾರೆ.