ಪಂಜಾಬ್ ಮತ್ತು ಹರಿಯಾಣದಲ್ಲಿ ವಿವಿಧ ಬೆಳೆಗಳ ತ್ಯಾಜ್ಯವನ್ನು ಸುಡುವುದರಿಂದ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿದೆ. ದೀಪಾವಳಿ ಸಂದರ್ಭದಲ್ಲಿ ವಿಪರೀತವಾಗಿ ಪಟಾಕಿಗಳನ್ನು ಸುಟ್ಟಿರುವುದರಿಂದ ವಾಯು ಗುಣಮಟ್ಟ ಇನ್ನಷ್ಟು ಹದಗೆಟ್ಟಿದೆ. ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿಗಳನ್ನು ಸಿಡಿಸಬಾರದು ಎಂದು ನ್ಯಾಯಾಲಯ ಇತ್ತೀಚೆಗೆ ಸೂಚಿಸಿತ್ತು. ಈ ಆದೇಶಕ್ಕೆ ಜನರು ಬೆಲೆ ನೀಡಲಿಲ್ಲ.