<p><strong>ನವದೆಹಲಿ</strong>: ಭಾರತದ ಅಗ್ರ ಲಾಂಗ್ಜಂಪ್ ಸ್ಪರ್ಧಿ ಮುರಳಿ ಶ್ರೀಶಂಕರ್ ಅವರು ತರಬೇತಿಯ ವೇಳೆ ಮೊಣಕಾಲು ನೋವಿಗೆ ಒಳಗಾಗಿದ್ದು, ಇದಕ್ಕೆ ಶಸ್ತ್ರಚಿಕಿತ್ಸೆಯ ಅಗತ್ಯವಿರುವ ಕಾರಣ ಪ್ಯಾರಿಸ್ ಒಲಿಂಪಿಕ್ಸ್ ಸೇರಿದಂತೆ ಈ ವರ್ಷದ ಪ್ರಮುಖ ಕೂಟಗಳನ್ನು ಕಳೆದುಕೊಳ್ಳಲಿದ್ದಾರೆ.</p>.<p>ಇದರೊಂದಿಗೆ ಅವರ ಒಲಿಂಪಿಕ್ಸ್ ಕನಸು ಭಗ್ನಗೊಂಡಿತು. 2023ರ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನಲ್ಲಿ ಅವರು ಬೆಳ್ಳಿ ಪದಕ ಗೆಲುವಿನ ಹಾದಿಯಲ್ಲಿ 8.37 ಮೀ. ದೂರ ಜಿಗಿದು ಒಲಿಂಪಿಕ್ಸ್ಗೆ ಅರ್ಹತೆ ಪಡೆದಿದ್ದರು. ಹಾಂಗ್ಝೌ ಏಷ್ಯನ್ ಗೇಮ್ಸ್ನಲ್ಲೂ ಅವರು ಬೆಳ್ಳಿ ಗೆದ್ದಿದ್ದರು.</p>.<p>25 ವರ್ಷದ ಮುರಳಿ, ಶಾಂಘೈ ಮತ್ತು ದೋಹಾದಲ್ಲಿ (ಕ್ರಮವಾಗಿ ಏ. 27 ಮತ್ತು ಮೇ 10) ನಡೆಯಲಿರುವ ಡೈಮಂಡ್ ಲೀಗ್ ಕೂಟಗಳಲ್ಲಿ ಭಾಗವಹಿಸಿ ಈ ಋತುವಿನ ಸ್ಪರ್ಧೆ ಆರಂಭಿಸಬೇಕಾಗಿತ್ತು. ಮಂಗಳವಾರ ತರಬೇತಿ ವೇಳೆ ಅವರಿಗೆ ಮೊಣಕಾಲಿನ ನೋವು ಕಾಣಿಸಿಕೊಂಡಿತು.</p>.<p>‘ದುರದೃಷ್ಟವಶಾತ್ ನನ್ನ ಪಾಲಿಗೆ ದುಃಸ್ವಪ್ನವೊಂದು ನಿಜವಾಗಿದೆ. ನನ್ನ ಪ್ಯಾರಿಸ್ ಒಲಿಂಪಿಕ್ಸ್ ಕನಸು ಕೊನೆಯಾಗಿದೆ’ ಎಂದು ಶ್ರೀಶಂಕರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.</p>.<p>‘ಮಂಗಳವಾರ ತರಬೇತಿ ವೇಳೆ ಮೊಣಕಾಲಿಗೆ ನೋವಿನ ಅನುಭವವಾಗಿದೆ. ಪರೀಕ್ಷೆಗಳು, ಸಮಾಲೋಚನೆಯ ನಂತರ ಇದಕ್ಕೆ ಶಸ್ತ್ರಚಿಕಿತ್ಸೆಯೇ ದಾರಿ ಎಂದು ಗೊತ್ತಾಗಿದೆ. ಇಷ್ಟೆಲ್ಲ ಸಮಯದಿಂದ ನಾನು ಕಾಯುತ್ತಿದ್ದ ಕೂಟವೊಂದರ ಕನಸು ಕೊನೆಯಾಗಿದೆ’ ಎಂದು ಭಾವನಾತ್ಮಕವಾಗಿ ಬರೆದಿದ್ದಾರೆ.</p>.<p>ಕಳೆದ ಜೂನ್ನಲ್ಲಿ ಶ್ರೀಶಂಕರ್ ಅವರು ಡೈಮಂಡ್ ಲೀಗ್ ಕೂಟವೊಂದರಲ್ಲಿ ಮೊದಲ ಮೂರರೊಳಗೆ ಸ್ಥಾನ ಪಡೆದಿದ್ದರು. ಈ ಸಾಧನೆ ಮಾಡಿದ ಭಾರತದ ಮೂರನೇ ಅಥ್ಲೀಟ್ ಎನಿಸಿದ್ದರು. ಆದರೆ ಬುಡಾಪೆಸ್ಟ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಅವರು ಅರ್ಹತಾ ಸುತ್ತಿನಲ್ಲೇ ಹೊರಬಿದ್ದು ನಿರಾಸೆ ಮೂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತದ ಅಗ್ರ ಲಾಂಗ್ಜಂಪ್ ಸ್ಪರ್ಧಿ ಮುರಳಿ ಶ್ರೀಶಂಕರ್ ಅವರು ತರಬೇತಿಯ ವೇಳೆ ಮೊಣಕಾಲು ನೋವಿಗೆ ಒಳಗಾಗಿದ್ದು, ಇದಕ್ಕೆ ಶಸ್ತ್ರಚಿಕಿತ್ಸೆಯ ಅಗತ್ಯವಿರುವ ಕಾರಣ ಪ್ಯಾರಿಸ್ ಒಲಿಂಪಿಕ್ಸ್ ಸೇರಿದಂತೆ ಈ ವರ್ಷದ ಪ್ರಮುಖ ಕೂಟಗಳನ್ನು ಕಳೆದುಕೊಳ್ಳಲಿದ್ದಾರೆ.</p>.<p>ಇದರೊಂದಿಗೆ ಅವರ ಒಲಿಂಪಿಕ್ಸ್ ಕನಸು ಭಗ್ನಗೊಂಡಿತು. 2023ರ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನಲ್ಲಿ ಅವರು ಬೆಳ್ಳಿ ಪದಕ ಗೆಲುವಿನ ಹಾದಿಯಲ್ಲಿ 8.37 ಮೀ. ದೂರ ಜಿಗಿದು ಒಲಿಂಪಿಕ್ಸ್ಗೆ ಅರ್ಹತೆ ಪಡೆದಿದ್ದರು. ಹಾಂಗ್ಝೌ ಏಷ್ಯನ್ ಗೇಮ್ಸ್ನಲ್ಲೂ ಅವರು ಬೆಳ್ಳಿ ಗೆದ್ದಿದ್ದರು.</p>.<p>25 ವರ್ಷದ ಮುರಳಿ, ಶಾಂಘೈ ಮತ್ತು ದೋಹಾದಲ್ಲಿ (ಕ್ರಮವಾಗಿ ಏ. 27 ಮತ್ತು ಮೇ 10) ನಡೆಯಲಿರುವ ಡೈಮಂಡ್ ಲೀಗ್ ಕೂಟಗಳಲ್ಲಿ ಭಾಗವಹಿಸಿ ಈ ಋತುವಿನ ಸ್ಪರ್ಧೆ ಆರಂಭಿಸಬೇಕಾಗಿತ್ತು. ಮಂಗಳವಾರ ತರಬೇತಿ ವೇಳೆ ಅವರಿಗೆ ಮೊಣಕಾಲಿನ ನೋವು ಕಾಣಿಸಿಕೊಂಡಿತು.</p>.<p>‘ದುರದೃಷ್ಟವಶಾತ್ ನನ್ನ ಪಾಲಿಗೆ ದುಃಸ್ವಪ್ನವೊಂದು ನಿಜವಾಗಿದೆ. ನನ್ನ ಪ್ಯಾರಿಸ್ ಒಲಿಂಪಿಕ್ಸ್ ಕನಸು ಕೊನೆಯಾಗಿದೆ’ ಎಂದು ಶ್ರೀಶಂಕರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.</p>.<p>‘ಮಂಗಳವಾರ ತರಬೇತಿ ವೇಳೆ ಮೊಣಕಾಲಿಗೆ ನೋವಿನ ಅನುಭವವಾಗಿದೆ. ಪರೀಕ್ಷೆಗಳು, ಸಮಾಲೋಚನೆಯ ನಂತರ ಇದಕ್ಕೆ ಶಸ್ತ್ರಚಿಕಿತ್ಸೆಯೇ ದಾರಿ ಎಂದು ಗೊತ್ತಾಗಿದೆ. ಇಷ್ಟೆಲ್ಲ ಸಮಯದಿಂದ ನಾನು ಕಾಯುತ್ತಿದ್ದ ಕೂಟವೊಂದರ ಕನಸು ಕೊನೆಯಾಗಿದೆ’ ಎಂದು ಭಾವನಾತ್ಮಕವಾಗಿ ಬರೆದಿದ್ದಾರೆ.</p>.<p>ಕಳೆದ ಜೂನ್ನಲ್ಲಿ ಶ್ರೀಶಂಕರ್ ಅವರು ಡೈಮಂಡ್ ಲೀಗ್ ಕೂಟವೊಂದರಲ್ಲಿ ಮೊದಲ ಮೂರರೊಳಗೆ ಸ್ಥಾನ ಪಡೆದಿದ್ದರು. ಈ ಸಾಧನೆ ಮಾಡಿದ ಭಾರತದ ಮೂರನೇ ಅಥ್ಲೀಟ್ ಎನಿಸಿದ್ದರು. ಆದರೆ ಬುಡಾಪೆಸ್ಟ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಅವರು ಅರ್ಹತಾ ಸುತ್ತಿನಲ್ಲೇ ಹೊರಬಿದ್ದು ನಿರಾಸೆ ಮೂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>