ಮಂಗಳೂರು:ರಾಜ್ಯ ಮುಯ್ ಥಾಯ್ ಅಸೋಸಿಯೇಷನ್ ವತಿಯಿಂದ ನಗರದ ಆಫೀಸರ್ಸ್ ಕ್ಲಬ್ನಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಮುಯ್ ಥಾಯ್ ಚಾಂಪಿಯನ್ಷಿಪ್ ಪಂದ್ಯಾವಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಭಾನುವಾರ ಚಾಲನೆ ನೀಡಿದರು.
ರಾಜ್ಯದ ವಿವಿಧೆಡೆಯಿಂದ ಬಂದಿರುವ 50ಕ್ಕೂ ಹೆಚ್ಚು ಮುಯ್ ಥಾಯ್ ಪಟುಗಳು ಈ ಚಾಂಪಿಯನ್ಷಿಪ್ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ನವೆಂಬರ್ ನಲ್ಲಿ ಪುಣೆಯಲ್ಲಿ ನಡೆಯುವ ರಾಷ್ಟ್ರೀಯ ಚಾಂಪಿಯನ್ ಷಿಪ್ ಗೆ ಅರ್ಹತಾ ಸುತ್ತಿನಂತೆ ಈ ಪಂದ್ಯಾವಳಿ ನಡೆಯುತ್ತಿದೆ.
ಉದ್ಯಮಿ ಎ.ಸದಾನಂದ ಶೆಟ್ಟಿ. ಮಹಾನಗರ ಪಾಲಿಕೆ ಜಂಟಿ ಆಯುಕ್ತ ಗೋಕುಲದಾಸ್ ನಾಯಕ್, ರಾಷ್ಟ್ರೀಯ ಮುಯ್ ಥಾಯ್ ಅಸೋಸಿಯೇಷನ್ ಮಹಾನಿರ್ದೇಶಕ ದಯಾಚಂದ್ ಬೋಲ, ರಾಷ್ಟ್ರೀಯ ಕೋಚ್ ಬಾಲಕೃಷ್ಣ ಶೆಟ್ಟಿ ಹಾಜರಿದ್ದರು.