<p><strong>ಬರ್ಮಿಂಗ್ಹ್ಯಾಂ:</strong> ಆರನೇ ಶ್ರೇಯಾಂಕದ ಆಟಗಾರ್ತಿ ಪಿ.ವಿ.ಸಿಂಧು, ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನ ಮಹಿಳಾ ಸಿಂಗಲ್ಸ್ ಕ್ವಾರ್ಟರ್ಫೈನಲ್ನಲ್ಲಿ ಶುಕ್ರವಾರ ಜಪಾನ್ನ ನೊಜೊಮಿ ಒಕುಹಾರ ಎದುರು ಸೋಲನುಭವಿಸಿದರು. ಇದರೊಂದಿಗೆ ಟೂರ್ನಿಯಲ್ಲಿ ಭಾರತದ ಸವಾಲು ಅಂತ್ಯಗೊಂಡಿತು</p>.<p>ಶುಕ್ರವಾರ ನಡೆದ ಪಂದ್ಯದಲ್ಲಿ ಹಿನ್ನಡೆಯಿಂದ ಚೇತರಿಸಿದ ನಾಲ್ಕನೇ ಶ್ರೇಯಾಂಕದ ಒಕುಹಾರ 68 ನಿಮಿಷಗಳ ಸೆಣಸಾಟದಲ್ಲಿ 12–21, 21–15, 21–13 ರಿಂದ ಪುಸರ್ಲ ವಿ.ಸಿಂಧು ಅವರನ್ನು ಸೋಲಿಸಿದರು.</p>.<p>ಭಾರತದ ಮಹಿಳಾ ಡಬಲ್ಸ್ ಜೋಡಿ ಅಶ್ವಿನಿ ಪೊನ್ನಪ್ಪ–ಎನ್. ಸಿಕ್ಕಿರೆಡ್ಡಿ ಗುರುವಾರ ರಾತ್ರಿ ನಡೆದ ಎರಡನೇ ಸುತ್ತಿನ ಹಣಾಹಣಿಯಲ್ಲಿ ವಿಶ್ವದ 29ನೇ ರ್ಯಾಂಕಿನ ಜೋಡಿ 13–21, 14–21ರಿಂದ ಜಪಾನ್ನ ಮಿಸಾಕಿ ಮತ್ಸುಟೊಮೊ– ಆಯಾಕ್ ತಕಹಶಿ ಎದುರು ಸೋಲನುಭವಿಸಿತು.</p>.<p><strong>ಸಚಿವ ರಿಜಿಜುಗೆ ಕರೆ:</strong> ಗುರುವಾರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರಿಗೆ ದೂರವಾಣಿ ಕರೆ ಮಾಡಿದ್ದ ಸಿಂಧು, ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಟೂರ್ನಿಯಲ್ಲಿ ಮುಂದುವರಿಯಬೇಕೇ ಎಂದು ಕೇಳಿದ್ದರು. ಇದಕ್ಕೆ ಉತ್ತರಿಸಿದ ಸಚಿವರು ಅಲ್ಲಿನ ಸುರಕ್ಷತಾ ನಿಯಮ ಪಾಲಿಸಿ ಮುಂದುವರಿಯುವಂತೆ ಸಲಹೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬರ್ಮಿಂಗ್ಹ್ಯಾಂ:</strong> ಆರನೇ ಶ್ರೇಯಾಂಕದ ಆಟಗಾರ್ತಿ ಪಿ.ವಿ.ಸಿಂಧು, ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನ ಮಹಿಳಾ ಸಿಂಗಲ್ಸ್ ಕ್ವಾರ್ಟರ್ಫೈನಲ್ನಲ್ಲಿ ಶುಕ್ರವಾರ ಜಪಾನ್ನ ನೊಜೊಮಿ ಒಕುಹಾರ ಎದುರು ಸೋಲನುಭವಿಸಿದರು. ಇದರೊಂದಿಗೆ ಟೂರ್ನಿಯಲ್ಲಿ ಭಾರತದ ಸವಾಲು ಅಂತ್ಯಗೊಂಡಿತು</p>.<p>ಶುಕ್ರವಾರ ನಡೆದ ಪಂದ್ಯದಲ್ಲಿ ಹಿನ್ನಡೆಯಿಂದ ಚೇತರಿಸಿದ ನಾಲ್ಕನೇ ಶ್ರೇಯಾಂಕದ ಒಕುಹಾರ 68 ನಿಮಿಷಗಳ ಸೆಣಸಾಟದಲ್ಲಿ 12–21, 21–15, 21–13 ರಿಂದ ಪುಸರ್ಲ ವಿ.ಸಿಂಧು ಅವರನ್ನು ಸೋಲಿಸಿದರು.</p>.<p>ಭಾರತದ ಮಹಿಳಾ ಡಬಲ್ಸ್ ಜೋಡಿ ಅಶ್ವಿನಿ ಪೊನ್ನಪ್ಪ–ಎನ್. ಸಿಕ್ಕಿರೆಡ್ಡಿ ಗುರುವಾರ ರಾತ್ರಿ ನಡೆದ ಎರಡನೇ ಸುತ್ತಿನ ಹಣಾಹಣಿಯಲ್ಲಿ ವಿಶ್ವದ 29ನೇ ರ್ಯಾಂಕಿನ ಜೋಡಿ 13–21, 14–21ರಿಂದ ಜಪಾನ್ನ ಮಿಸಾಕಿ ಮತ್ಸುಟೊಮೊ– ಆಯಾಕ್ ತಕಹಶಿ ಎದುರು ಸೋಲನುಭವಿಸಿತು.</p>.<p><strong>ಸಚಿವ ರಿಜಿಜುಗೆ ಕರೆ:</strong> ಗುರುವಾರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರಿಗೆ ದೂರವಾಣಿ ಕರೆ ಮಾಡಿದ್ದ ಸಿಂಧು, ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಟೂರ್ನಿಯಲ್ಲಿ ಮುಂದುವರಿಯಬೇಕೇ ಎಂದು ಕೇಳಿದ್ದರು. ಇದಕ್ಕೆ ಉತ್ತರಿಸಿದ ಸಚಿವರು ಅಲ್ಲಿನ ಸುರಕ್ಷತಾ ನಿಯಮ ಪಾಲಿಸಿ ಮುಂದುವರಿಯುವಂತೆ ಸಲಹೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>