<p><strong>ನವದೆಹಲಿ:</strong> ಬೆಂಗಳೂರಿನಲ್ಲಿರುವ ಭಾರತ ಕ್ರೀಡಾ ಪ್ರಾಧಿಕಾರದ ನೇತಾಜಿ ಸುಭಾಷ್ ದಕ್ಷಿಣ ಪ್ರಾದೇಶಿಕ ಕೇಂದ್ರದಲ್ಲಿ (ಸಾಯ್ ಎನ್ಎಸ್ಎಸ್ಸಿ) ನಿರ್ಮಾಣವಾಗಲಿರುವ ಅತ್ಯಾಧುನಿಕ ಉನ್ನತ ಕಾರ್ಯಕ್ಷಮತೆ ಕೇಂದ್ರಕ್ಕೆ (ಎಚ್ಪಿಸಿ) ಬುಧವಾರ ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರು ವರ್ಚುವಲ್ ಮೂಲಕ ಶಿಲಾನ್ಯಾಸ ನೆರವೇರಿಸಿದರು. </p>.<p>ಅತ್ಯಾಧುನಿಕ ಉನ್ನತ ಕಾರ್ಯಕ್ಷಮತೆ ಕೇಂದ್ರಕ್ಕೆ ₹75 ಕೋಟಿ ವೆಚ್ಚವಾಗಲಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ (ಎಚ್ಎಎಲ್) ಸಾಮಾಜಿಕ ಹೊಣೆಗಾರಿಕೆ ನಿಧಿಯ (ಸಿಎಸ್ಆರ್) ಬೆಂಬಲದೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಗೆ ಎಚ್ಎಎಲ್ ₹ 60 ಕೋಟಿ ಕೊಡುಗೆ ನೀಡಲಿದೆ. ಮುಂದಿನ 12 ತಿಂಗಳಲ್ಲಿ ಕೇಂದ್ರವು ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ ಎಂದು ಸಾಯ್ ಮೂಲಗಳು ತಿಳಿಸಿವೆ.</p>.<p>ಉನ್ನತ ಕಾರ್ಯಕ್ಷಮತೆ ಕೇಂದ್ರದಲ್ಲಿ ಅತ್ಯಾಧುನಿಕ ಕ್ರೀಡಾ ವಿಜ್ಞಾನ ವ್ಯವಸ್ಥೆ, ಕ್ರೀಡಾ ಔಷಧ, ಪುನಃಶ್ಚೇತನಕ್ಕೆ ಅಗತ್ಯ ಸೌಲಭ್ಯ, ಬಯೋಮೆಕಾನಿಕ್ಸ್, ಶರೀರಶಾಸ್ತ್ರ, ಮನೋವಿಜ್ಞಾನ, ಪೋಷಕಾಂಶ, ಕಾರ್ಯಕ್ಷಮತೆ ವಿಶ್ಲೇಷಣೆ ಮತ್ತು ಹೈಡ್ರೋಥೆರಪಿ ಮುಂತಾದ ಸುಧಾರಿತ ಸೌಲಭ್ಯಗಳು ಒಳಗೊಂಡಿರಲಿದೆ. </p>.<p>ಬೆಂಗಳೂರಿನ ಸಾಯ್ ಎನ್ಎಸ್ಎಸ್ಸಿ ದೇಶದ ಪ್ರಮುಖ ಕ್ರೀಡಾ ಕೇಂದ್ರಗಳಲ್ಲಿ ಒಂದಾಗಿದೆ. ಇಲ್ಲಿ ರಾಷ್ಟ್ರೀಯ ಶ್ರೇಷ್ಠತಾ ಕೇಂದ್ರಗಳು, ಕೋಚಿಂಗ್ ಶಿಬಿರಗಳು ಮತ್ತು ಅಥ್ಲೀಟ್ಗಳಿಗೆ ಮತ್ತು ಹಾಕಿ ತಂಡಕ್ಕೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವೆ.</p>.<p>ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸಾಯ್ ಕಾರ್ಯದರ್ಶಿ ವಿಷ್ಣುಕಾಂತ್ ತಿವಾರಿ ಮತ್ತು ಎಚ್ಎಎಲ್ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಡಿ.ಕೆ. ಸುನಿಲ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬೆಂಗಳೂರಿನಲ್ಲಿರುವ ಭಾರತ ಕ್ರೀಡಾ ಪ್ರಾಧಿಕಾರದ ನೇತಾಜಿ ಸುಭಾಷ್ ದಕ್ಷಿಣ ಪ್ರಾದೇಶಿಕ ಕೇಂದ್ರದಲ್ಲಿ (ಸಾಯ್ ಎನ್ಎಸ್ಎಸ್ಸಿ) ನಿರ್ಮಾಣವಾಗಲಿರುವ ಅತ್ಯಾಧುನಿಕ ಉನ್ನತ ಕಾರ್ಯಕ್ಷಮತೆ ಕೇಂದ್ರಕ್ಕೆ (ಎಚ್ಪಿಸಿ) ಬುಧವಾರ ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರು ವರ್ಚುವಲ್ ಮೂಲಕ ಶಿಲಾನ್ಯಾಸ ನೆರವೇರಿಸಿದರು. </p>.<p>ಅತ್ಯಾಧುನಿಕ ಉನ್ನತ ಕಾರ್ಯಕ್ಷಮತೆ ಕೇಂದ್ರಕ್ಕೆ ₹75 ಕೋಟಿ ವೆಚ್ಚವಾಗಲಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ (ಎಚ್ಎಎಲ್) ಸಾಮಾಜಿಕ ಹೊಣೆಗಾರಿಕೆ ನಿಧಿಯ (ಸಿಎಸ್ಆರ್) ಬೆಂಬಲದೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಗೆ ಎಚ್ಎಎಲ್ ₹ 60 ಕೋಟಿ ಕೊಡುಗೆ ನೀಡಲಿದೆ. ಮುಂದಿನ 12 ತಿಂಗಳಲ್ಲಿ ಕೇಂದ್ರವು ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ ಎಂದು ಸಾಯ್ ಮೂಲಗಳು ತಿಳಿಸಿವೆ.</p>.<p>ಉನ್ನತ ಕಾರ್ಯಕ್ಷಮತೆ ಕೇಂದ್ರದಲ್ಲಿ ಅತ್ಯಾಧುನಿಕ ಕ್ರೀಡಾ ವಿಜ್ಞಾನ ವ್ಯವಸ್ಥೆ, ಕ್ರೀಡಾ ಔಷಧ, ಪುನಃಶ್ಚೇತನಕ್ಕೆ ಅಗತ್ಯ ಸೌಲಭ್ಯ, ಬಯೋಮೆಕಾನಿಕ್ಸ್, ಶರೀರಶಾಸ್ತ್ರ, ಮನೋವಿಜ್ಞಾನ, ಪೋಷಕಾಂಶ, ಕಾರ್ಯಕ್ಷಮತೆ ವಿಶ್ಲೇಷಣೆ ಮತ್ತು ಹೈಡ್ರೋಥೆರಪಿ ಮುಂತಾದ ಸುಧಾರಿತ ಸೌಲಭ್ಯಗಳು ಒಳಗೊಂಡಿರಲಿದೆ. </p>.<p>ಬೆಂಗಳೂರಿನ ಸಾಯ್ ಎನ್ಎಸ್ಎಸ್ಸಿ ದೇಶದ ಪ್ರಮುಖ ಕ್ರೀಡಾ ಕೇಂದ್ರಗಳಲ್ಲಿ ಒಂದಾಗಿದೆ. ಇಲ್ಲಿ ರಾಷ್ಟ್ರೀಯ ಶ್ರೇಷ್ಠತಾ ಕೇಂದ್ರಗಳು, ಕೋಚಿಂಗ್ ಶಿಬಿರಗಳು ಮತ್ತು ಅಥ್ಲೀಟ್ಗಳಿಗೆ ಮತ್ತು ಹಾಕಿ ತಂಡಕ್ಕೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವೆ.</p>.<p>ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸಾಯ್ ಕಾರ್ಯದರ್ಶಿ ವಿಷ್ಣುಕಾಂತ್ ತಿವಾರಿ ಮತ್ತು ಎಚ್ಎಎಲ್ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಡಿ.ಕೆ. ಸುನಿಲ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>