<p><strong>ಚಿತ್ರದುರ್ಗ</strong>: ರಾಜ್ಯಮಟ್ಟದ ಹೊನಲು ಬೆಳಕಿನ ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ಆತಿಥೇಯ ಚಿತ್ರದುರ್ಗ ಹಾಗೂ ಬೆಳಗಾವಿ ಕ್ರಮವಾಗಿ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ ಅಗ್ರಸ್ಥಾನ ಗಳಿಸಿದವು.</p>.<p>ರಾಜ್ಯ ಮತ್ತು ಜಿಲ್ಲಾ ಹ್ಯಾಂಡ್ಬಾಲ್ ಸಂಸ್ಥೆ, ಕದಂಬ ಯೂತ್ ಹ್ಯಾಂಡ್ಬಾಲ್ ಸಂಸ್ಥೆಯಿಂದ ರಾಷ್ಟ್ರೀಯ ಹ್ಯಾಂಡ್ಬಾಲ್ ಕ್ರೀಡಾಪಟು ಎಸ್.ಎನ್. ಸ್ವಾಮಿ ಸ್ಮರಣಾರ್ಥ ಇಲ್ಲಿನ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು.</p>.<p>ಪುರುಷರ ವಿಭಾಗದಲ್ಲಿ ಚಿತ್ರದುರ್ಗ ಹಾಗೂ ಬೆಂಗಳೂರಿನ ಸ್ಟಾರ್ ಶೂಟರ್ಸ್ ತಂಡಗಳ ನಡುವೆ ಹಣಾಹಣಿ ನಡೆಯಿತು. ಚಿತ್ರದುರ್ಗ ತಂಡವು ಬೆಂಗಳೂರು ತಂಡವನ್ನು 25–17ರಿಂದ ಮಣಿಸಿತು.</p>.<p>ಮಹಿಳೆಯರ ವಿಭಾಗದಲ್ಲಿ ಬೆಳಗಾವಿ ಹಾಗೂ ಶಿವಮೊಗ್ಗ ತಂಡಗಳ ನಡುವೆ ಫೈನಲ್ ಪಂದ್ಯ ನಡೆಯಿತು. ಬೆಳಗಾವಿ ತಂಡವು ಶಿವಮೊಗ್ಗ ತಂಡವನ್ನು 17–4ರಿಂದ ಸೋಲಿಸಿತು. ಮಂಗಳೂರು ತಂಡ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.</p>.<p>ಹ್ಯಾಂಡ್ಬಾಲ್ ಸಂಸ್ಥೆ ರಾಜ್ಯ ಘಟಕದ ಅಧ್ಯಕ್ಷ ಡಾ. ಮನೋಜ್ ಪಿ. ಸಾಹುಕಾರ್, ಕಾರ್ಯಾಧ್ಯಕ್ಷ ಶಿವರಾಂ, ಕಾರ್ಯದರ್ಶಿ ಬಿ.ಎಲ್. ಲೋಕೇಶ್, ಉದ್ಯಮಿ ಸೈಟ್ಬಾಬು, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಜಯಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ರಾಜ್ಯಮಟ್ಟದ ಹೊನಲು ಬೆಳಕಿನ ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ಆತಿಥೇಯ ಚಿತ್ರದುರ್ಗ ಹಾಗೂ ಬೆಳಗಾವಿ ಕ್ರಮವಾಗಿ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ ಅಗ್ರಸ್ಥಾನ ಗಳಿಸಿದವು.</p>.<p>ರಾಜ್ಯ ಮತ್ತು ಜಿಲ್ಲಾ ಹ್ಯಾಂಡ್ಬಾಲ್ ಸಂಸ್ಥೆ, ಕದಂಬ ಯೂತ್ ಹ್ಯಾಂಡ್ಬಾಲ್ ಸಂಸ್ಥೆಯಿಂದ ರಾಷ್ಟ್ರೀಯ ಹ್ಯಾಂಡ್ಬಾಲ್ ಕ್ರೀಡಾಪಟು ಎಸ್.ಎನ್. ಸ್ವಾಮಿ ಸ್ಮರಣಾರ್ಥ ಇಲ್ಲಿನ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು.</p>.<p>ಪುರುಷರ ವಿಭಾಗದಲ್ಲಿ ಚಿತ್ರದುರ್ಗ ಹಾಗೂ ಬೆಂಗಳೂರಿನ ಸ್ಟಾರ್ ಶೂಟರ್ಸ್ ತಂಡಗಳ ನಡುವೆ ಹಣಾಹಣಿ ನಡೆಯಿತು. ಚಿತ್ರದುರ್ಗ ತಂಡವು ಬೆಂಗಳೂರು ತಂಡವನ್ನು 25–17ರಿಂದ ಮಣಿಸಿತು.</p>.<p>ಮಹಿಳೆಯರ ವಿಭಾಗದಲ್ಲಿ ಬೆಳಗಾವಿ ಹಾಗೂ ಶಿವಮೊಗ್ಗ ತಂಡಗಳ ನಡುವೆ ಫೈನಲ್ ಪಂದ್ಯ ನಡೆಯಿತು. ಬೆಳಗಾವಿ ತಂಡವು ಶಿವಮೊಗ್ಗ ತಂಡವನ್ನು 17–4ರಿಂದ ಸೋಲಿಸಿತು. ಮಂಗಳೂರು ತಂಡ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.</p>.<p>ಹ್ಯಾಂಡ್ಬಾಲ್ ಸಂಸ್ಥೆ ರಾಜ್ಯ ಘಟಕದ ಅಧ್ಯಕ್ಷ ಡಾ. ಮನೋಜ್ ಪಿ. ಸಾಹುಕಾರ್, ಕಾರ್ಯಾಧ್ಯಕ್ಷ ಶಿವರಾಂ, ಕಾರ್ಯದರ್ಶಿ ಬಿ.ಎಲ್. ಲೋಕೇಶ್, ಉದ್ಯಮಿ ಸೈಟ್ಬಾಬು, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಜಯಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>