<p><strong>ನವದೆಹಲಿ:</strong> ದೇಶದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂಡಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯನ್ನು ಮುಂದೂಡಲಾಗಿದೆ. ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಗಳಿಸುವ ಕೊನೆಯ ಮೂರು ಟೂರ್ನಿಗಳಲ್ಲಿ ಇದೂ ಒಂದಾಗಿದೆ.</p>.<p>ಸುಮಾರು ₹ 3 ಕೋಟಿ ಬಹುಮಾನ ಮೊತ್ತದ ಟೂರ್ನಿಯು ನವದೆಹಲಿಯಲ್ಲಿ ಮೇ 11ರಿಂದ 16ರವರೆಗೆ ನಡೆಯಬೇಕಿತ್ತು.</p>.<p>‘ಕೋವಿಡ್ನಿಂದ ಉಂಟಾಗಿರುವ ಸದ್ಯದ ಬಿಕ್ಕಟ್ಟನ್ನು ಗಮನಿಸಿದರೆ ಟೂರ್ನಿಯನ್ನು ಮುಂದೂಡದೇ ಬೇರೆ ದಾರಿಯಿಲ್ಲ. ಆಟಗಾರರು ಹಾಗೂ ಸಿಬ್ಬಂದಿಯ ಸುರಕ್ಷತೆಯನ್ನು ಪರಿಗಣಿಸಿ ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ (ಬಿಡಬ್ಲ್ಯುಎಫ್) ಮತ್ತು ದೆಹಲಿ ಸರ್ಕಾರದೊಂದಿಗೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ‘ ಎಂದು ಭಾರತ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) ಪ್ರಧಾನ ಕಾರ್ಯದರ್ಶಿ ಅಜಯ್ ಸಿಂಘಾನಿಯಾ ತಿಳಿಸಿದ್ದಾರೆ. ವರ್ಚುವಲ್ ಪತ್ರಿಕಾಗೋಷ್ಠಿಯ ಮೂಲಕ ಅವರು ಈ ವಿಷಯ ಪ್ರಕಟಿಸಿದರು.</p>.<p>ಟೂರ್ನಿ ನಡೆಸುವ ಮುಂದಿನ ದಿನಾಂಕವನ್ನು ಪ್ರಕಟಿಸಿಲ್ಲ.</p>.<p>ಕೊರೊನಾ ಸೋಂಕು ಪ್ರಕರಣಗಳು ಯದ್ವಾತದ್ವಾ ಏರುತ್ತಿರುವುದರಿಂದ, ಒಲಿಂಪಿಕ್ ಚಾಂಪಿಯನ್ ಕರೋಲಿನಾ ಮರಿನ್, ರಚನೊಕ್ ಇಂತನನ್, ಆ್ಯಂಡರ್ಸ್ ಆ್ಯಂಟನ್ಸನ್ ಹಾಗೂ ರಾಸ್ಮಸ್ ಗೆಮ್ಕೆ ಸೇರಿದಂತೆ ವಿಶ್ವದ ಪ್ರಮುಖ ಆಟಗಾರರು ಈ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.</p>.<p>ಕಳೆದ ಆವೃತ್ತಿಯ ಇಂಡಿಯಾ ಓಪನ್ ಟೂರ್ನಿಯನ್ನು ರದ್ದು ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂಡಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯನ್ನು ಮುಂದೂಡಲಾಗಿದೆ. ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಗಳಿಸುವ ಕೊನೆಯ ಮೂರು ಟೂರ್ನಿಗಳಲ್ಲಿ ಇದೂ ಒಂದಾಗಿದೆ.</p>.<p>ಸುಮಾರು ₹ 3 ಕೋಟಿ ಬಹುಮಾನ ಮೊತ್ತದ ಟೂರ್ನಿಯು ನವದೆಹಲಿಯಲ್ಲಿ ಮೇ 11ರಿಂದ 16ರವರೆಗೆ ನಡೆಯಬೇಕಿತ್ತು.</p>.<p>‘ಕೋವಿಡ್ನಿಂದ ಉಂಟಾಗಿರುವ ಸದ್ಯದ ಬಿಕ್ಕಟ್ಟನ್ನು ಗಮನಿಸಿದರೆ ಟೂರ್ನಿಯನ್ನು ಮುಂದೂಡದೇ ಬೇರೆ ದಾರಿಯಿಲ್ಲ. ಆಟಗಾರರು ಹಾಗೂ ಸಿಬ್ಬಂದಿಯ ಸುರಕ್ಷತೆಯನ್ನು ಪರಿಗಣಿಸಿ ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ (ಬಿಡಬ್ಲ್ಯುಎಫ್) ಮತ್ತು ದೆಹಲಿ ಸರ್ಕಾರದೊಂದಿಗೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ‘ ಎಂದು ಭಾರತ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) ಪ್ರಧಾನ ಕಾರ್ಯದರ್ಶಿ ಅಜಯ್ ಸಿಂಘಾನಿಯಾ ತಿಳಿಸಿದ್ದಾರೆ. ವರ್ಚುವಲ್ ಪತ್ರಿಕಾಗೋಷ್ಠಿಯ ಮೂಲಕ ಅವರು ಈ ವಿಷಯ ಪ್ರಕಟಿಸಿದರು.</p>.<p>ಟೂರ್ನಿ ನಡೆಸುವ ಮುಂದಿನ ದಿನಾಂಕವನ್ನು ಪ್ರಕಟಿಸಿಲ್ಲ.</p>.<p>ಕೊರೊನಾ ಸೋಂಕು ಪ್ರಕರಣಗಳು ಯದ್ವಾತದ್ವಾ ಏರುತ್ತಿರುವುದರಿಂದ, ಒಲಿಂಪಿಕ್ ಚಾಂಪಿಯನ್ ಕರೋಲಿನಾ ಮರಿನ್, ರಚನೊಕ್ ಇಂತನನ್, ಆ್ಯಂಡರ್ಸ್ ಆ್ಯಂಟನ್ಸನ್ ಹಾಗೂ ರಾಸ್ಮಸ್ ಗೆಮ್ಕೆ ಸೇರಿದಂತೆ ವಿಶ್ವದ ಪ್ರಮುಖ ಆಟಗಾರರು ಈ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.</p>.<p>ಕಳೆದ ಆವೃತ್ತಿಯ ಇಂಡಿಯಾ ಓಪನ್ ಟೂರ್ನಿಯನ್ನು ರದ್ದು ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>