ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಳಿಗಾಲದ ಒಲಿಂಪಿಕ್ ಜ್ಯೋತಿ ಹಿಡಿದ ಗಾಲ್ವನ್ ಸಂಘರ್ಷದ ಚೀನಾ ಯೋಧ: ಭಾರತ ಬಹಿಷ್ಕಾರ

Last Updated 3 ಫೆಬ್ರುವರಿ 2022, 12:38 IST
ಅಕ್ಷರ ಗಾತ್ರ

ನವದೆಹಲಿ: ಬೀಜಿಂಗ್‌ನಲ್ಲಿ ನಡೆಯುತ್ತಿರುವ ಚಳಿಗಾಲದ ಒಲಿಂಪಿಕ್ಸ್‌ನ ಉದ್ಘಾಟನಾ ಹಾಗೂ ಸಮಾರೋಪ ಸಮಾರಂಭವನ್ನು ಭಾರತ ಬಹಿಷ್ಕರಿಸಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.

ಇದರೊಂದಿಗೆ ಗಾಲ್ವನ್ ಘರ್ಷಣೆಗೆ ಸಂಬಂಧಿಸಿದಂತೆ ಹೊಸ ವಿವಾದ ಭುಗಿಲೆದ್ದಿದೆ.

ಗಾಲ್ವನ್ ಕಣಿವೆಯ ಘರ್ಷಣೆಯಲ್ಲಿ ಭಾಗಿಯಾಗಿದ್ದ ಚೀನಾದ ಸೈನಿಕನೊಬ್ಬ ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನ ಸಾಂಪ್ರದಾಯಿಕ ಜ್ಯೋತಿ ಹಿಡಿದಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನು ಖಂಡಿಸಿರುವ ಭಾರತದ ರಾಯಭಾರ ಕಚೇರಿಯು, ಕ್ರೀಡೆಯನ್ನು ರಾಜಕೀಯಗೊಳಿಸುತ್ತಿರುವುದು ವಿಷಾದನೀಯ ಎಂದಿದ್ದು, ಚಳಿಗಾಲದ ಒಲಿಂಪಿಕ್ಸ್‌ನ ಉದ್ಘಾಟನಾ ಹಾಗೂ ಸಮಾರೋಪ ಸಮಾರಂಭದಲ್ಲಿ ಭಾಗವಹಿಸದಿರಲು ನಿರ್ಧರಿಸಿದೆ.

'ಈ ವಿಷಯದ ವರದಿಗಳನ್ನು ನಾವು ಗಮನಿಸಿದ್ದೇವೆ. ಒಲಿಂಪಿಕ್ಸ್‌ನಂತಹ ಕ್ರೀಡೆಯನ್ನು ರಾಜಕೀಯಗೊಳಿಸಲು ಚೀನಾ ಯತ್ನಿಸಿರುವುದು ನಿಜಕ್ಕೂ ವಿಷಾದನೀಯ. ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನ ಉದ್ಘಾಟನಾ ಹಾಗೂ ಸಮಾರೋಪ ಸಮಾರಂಭಗಳಲ್ಲಿ ಭಾಗವಹಿಸದಿರಲು ನಿರ್ಧರಿಸಲಾಗಿದೆ' ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT