<p><strong>ನವದೆಹಲಿ</strong>: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದು ತವರಿಗೆ ಬಂದ ಭಾರತ ಹಾಕಿ ತಂಡದ ಆಟಗಾರರಿಗೆ ಶನಿವಾರ ನವದೆಹಲಿಯ ವಿಮಾನನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡಲಾಗಿತು.</p>.<p>ಮೂರನೇ ಸ್ಥಾನಕ್ಕಾಗಿ ಗುರುವಾರ ನಡೆದ ಪಂದ್ಯದಲ್ಲಿ ಭಾರತದ ಆಟಗಾರರು 2–1 ಗೋಲುಗಳಿಂದ ಸ್ಪೇನ್ ತಂಡವನ್ನು ಮಣಿಸಿ, ಒಲಿಂಪಿಕ್ಸ್ನಲ್ಲಿ ಸತತ ಎರಡನೇ ಬಾರಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು.</p>.<p>ಹಾಕಿ ತಂಡದ ಎಲ್ಲಾ ಆಟಗಾರರು ತವರಿಗೆ ಬಂದಿಲ್ಲ. ಭಾನುವಾರ ಒಲಿಂಪಿಕ್ಸ್ ಸಮಾರೋಪ ಸಮಾರಂಭ ನಡೆಯಲಿದ್ದು, ಹೀಗಾಗಿ ಕೆಲ ಆಟಗಾರರು ಪ್ಯಾರಿಸ್ನಲ್ಲೇ ಉಳಿಸಿದ್ದಾರೆ.</p>.<p>ಭಾರತದ ‘ವಾಲ್’ ಖ್ಯಾತಿಯ ಗೋಲ್ಕೀಪರ್ ಪಿ.ಆರ್. ಶ್ರೀಜೇಶ್ ಅವರು ಶೂಟರ್ ಮನು ಭಾಕರ್ ಅವರೊಂದಿಗೆ ಸಮಾರೋಪದಲ್ಲಿ ಧ್ವಜಧಾರಿಯಾಗಲಿದ್ದಾರೆ. ಅವರಿಗೆ ಇದು ನಾಲ್ಕನೇ ಒಲಿಂಪಿಕ್ಸ್ ಆಗಿದೆ. ಅವರು ಅಂತರರಾಷ್ಟ್ರೀಯ ಹಾಕಿಗೂ ನಿವೃತ್ತಿ ಘೋಷಿಸಿದ್ದಾರೆ.</p>.<p>ಶ್ರೀಜೇಶ್ ಅವರೊಂದಿಗೆ ಅಮಿತ್ ರೋಹಿದಾಸ್, ರಾಜ್ಕುಮಾರ್ ಪಾಲ್, ಅಭಿಷೇಕ್, ಸುಖಜೀತ್ ಸಿಂಗ್ ಮತ್ತು ಸಂಜಯ್ ಅವರು ಸಮಾರೋಪ ಸಮಾರಂಭದ ನಂತರ ತವರಿಗೆ ವಾಪಸಾಗಲಿದ್ದಾರೆ.</p>.<p>ತಂಡದ ನಾಯಕ ಹರ್ಮನ್ಪ್ರೀತ್ ಸಿಂಗ್ ಸೇರಿದಂತೆ ಹಲವು ಆಟಗಾರರು ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಶನಿವಾರ ಬೆಳಿಗ್ಗೆ ಬಂದಿದ್ದು, ಅವರನ್ನು ಹೂಮಾಲೆ ಮತ್ತು ಸಂಭ್ರಮದ ಡೋಲು ವಾದ್ಯಗಳೊಂದಿಗೆ ಸ್ವಾಗತಿಸಲಾಯಿತು.</p>.<p>‘ತಂಡಕ್ಕೆ ಎಲ್ಲ ಕಡೆಯಿಂದಲೂ ಉತ್ತಮ ಸಹಕಾರ, ಪ್ರೋತ್ಸಾಹ ದೊರಕಿದೆ. ಪ್ಯಾರಿಸ್ನಲ್ಲಿ ಪದಕ ಗೆದ್ದಿರುವುದು ಸಂತಸವಾಗಿದೆ. ಬೆಂಬಲ ನೀಡಿದ ಎಲ್ಲರಿಗೂ ಕೃತಜ್ಞತೆಗಳು’ ಎಂದು ಹರ್ಮನ್ಪ್ರೀತ್ ಪ್ರತಿಕ್ರಿಯಿಸಿದರು.</p>.<p>ಈ ಬಾರಿಯ ಒಲಿಂಪಿಕ್ಸ್ನಲ್ಲಿ ಹರ್ಮನ್ಪ್ರೀತ್ ಒಟ್ಟು 10 ಗೋಲು ಗಳಿಸಿದ್ದು, ಪುರುಷರ ವಿಭಾಗದಲ್ಲಿ ಅತಿ ಹೆಚ್ಚು ಗೋಲು ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದರು.</p>.<p>ಭಾರತ ಹಾಕಿ ತಂಡಕ್ಕೆ ಇದು 13ನೇ ಒಲಿಂಪಕ್ಸ್ ಪದಕವಾಗಿದೆ. ಈ ಮೊದಲು ಎಂಟು ಚಿನ್ನ, ಒಂದು ಬೆಳ್ಳಿ ಮತ್ತು ಮೂರು ಕಂಚು ಗೆದ್ದಿದೆ. 1972ರ ನಂತರ ಇದೇ ಮೊದಲ ಬಾರಿಗೆ ಭಾರತ ಒಲಿಂಪಿಕ್ಸ್ನಲ್ಲಿ ಸತತ ಎರಡನೇ ಪದಕ ಗೆದ್ದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದು ತವರಿಗೆ ಬಂದ ಭಾರತ ಹಾಕಿ ತಂಡದ ಆಟಗಾರರಿಗೆ ಶನಿವಾರ ನವದೆಹಲಿಯ ವಿಮಾನನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡಲಾಗಿತು.</p>.<p>ಮೂರನೇ ಸ್ಥಾನಕ್ಕಾಗಿ ಗುರುವಾರ ನಡೆದ ಪಂದ್ಯದಲ್ಲಿ ಭಾರತದ ಆಟಗಾರರು 2–1 ಗೋಲುಗಳಿಂದ ಸ್ಪೇನ್ ತಂಡವನ್ನು ಮಣಿಸಿ, ಒಲಿಂಪಿಕ್ಸ್ನಲ್ಲಿ ಸತತ ಎರಡನೇ ಬಾರಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು.</p>.<p>ಹಾಕಿ ತಂಡದ ಎಲ್ಲಾ ಆಟಗಾರರು ತವರಿಗೆ ಬಂದಿಲ್ಲ. ಭಾನುವಾರ ಒಲಿಂಪಿಕ್ಸ್ ಸಮಾರೋಪ ಸಮಾರಂಭ ನಡೆಯಲಿದ್ದು, ಹೀಗಾಗಿ ಕೆಲ ಆಟಗಾರರು ಪ್ಯಾರಿಸ್ನಲ್ಲೇ ಉಳಿಸಿದ್ದಾರೆ.</p>.<p>ಭಾರತದ ‘ವಾಲ್’ ಖ್ಯಾತಿಯ ಗೋಲ್ಕೀಪರ್ ಪಿ.ಆರ್. ಶ್ರೀಜೇಶ್ ಅವರು ಶೂಟರ್ ಮನು ಭಾಕರ್ ಅವರೊಂದಿಗೆ ಸಮಾರೋಪದಲ್ಲಿ ಧ್ವಜಧಾರಿಯಾಗಲಿದ್ದಾರೆ. ಅವರಿಗೆ ಇದು ನಾಲ್ಕನೇ ಒಲಿಂಪಿಕ್ಸ್ ಆಗಿದೆ. ಅವರು ಅಂತರರಾಷ್ಟ್ರೀಯ ಹಾಕಿಗೂ ನಿವೃತ್ತಿ ಘೋಷಿಸಿದ್ದಾರೆ.</p>.<p>ಶ್ರೀಜೇಶ್ ಅವರೊಂದಿಗೆ ಅಮಿತ್ ರೋಹಿದಾಸ್, ರಾಜ್ಕುಮಾರ್ ಪಾಲ್, ಅಭಿಷೇಕ್, ಸುಖಜೀತ್ ಸಿಂಗ್ ಮತ್ತು ಸಂಜಯ್ ಅವರು ಸಮಾರೋಪ ಸಮಾರಂಭದ ನಂತರ ತವರಿಗೆ ವಾಪಸಾಗಲಿದ್ದಾರೆ.</p>.<p>ತಂಡದ ನಾಯಕ ಹರ್ಮನ್ಪ್ರೀತ್ ಸಿಂಗ್ ಸೇರಿದಂತೆ ಹಲವು ಆಟಗಾರರು ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಶನಿವಾರ ಬೆಳಿಗ್ಗೆ ಬಂದಿದ್ದು, ಅವರನ್ನು ಹೂಮಾಲೆ ಮತ್ತು ಸಂಭ್ರಮದ ಡೋಲು ವಾದ್ಯಗಳೊಂದಿಗೆ ಸ್ವಾಗತಿಸಲಾಯಿತು.</p>.<p>‘ತಂಡಕ್ಕೆ ಎಲ್ಲ ಕಡೆಯಿಂದಲೂ ಉತ್ತಮ ಸಹಕಾರ, ಪ್ರೋತ್ಸಾಹ ದೊರಕಿದೆ. ಪ್ಯಾರಿಸ್ನಲ್ಲಿ ಪದಕ ಗೆದ್ದಿರುವುದು ಸಂತಸವಾಗಿದೆ. ಬೆಂಬಲ ನೀಡಿದ ಎಲ್ಲರಿಗೂ ಕೃತಜ್ಞತೆಗಳು’ ಎಂದು ಹರ್ಮನ್ಪ್ರೀತ್ ಪ್ರತಿಕ್ರಿಯಿಸಿದರು.</p>.<p>ಈ ಬಾರಿಯ ಒಲಿಂಪಿಕ್ಸ್ನಲ್ಲಿ ಹರ್ಮನ್ಪ್ರೀತ್ ಒಟ್ಟು 10 ಗೋಲು ಗಳಿಸಿದ್ದು, ಪುರುಷರ ವಿಭಾಗದಲ್ಲಿ ಅತಿ ಹೆಚ್ಚು ಗೋಲು ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದರು.</p>.<p>ಭಾರತ ಹಾಕಿ ತಂಡಕ್ಕೆ ಇದು 13ನೇ ಒಲಿಂಪಕ್ಸ್ ಪದಕವಾಗಿದೆ. ಈ ಮೊದಲು ಎಂಟು ಚಿನ್ನ, ಒಂದು ಬೆಳ್ಳಿ ಮತ್ತು ಮೂರು ಕಂಚು ಗೆದ್ದಿದೆ. 1972ರ ನಂತರ ಇದೇ ಮೊದಲ ಬಾರಿಗೆ ಭಾರತ ಒಲಿಂಪಿಕ್ಸ್ನಲ್ಲಿ ಸತತ ಎರಡನೇ ಪದಕ ಗೆದ್ದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>