ಈ ಕುರಿತು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜುಜು ಅವರಿಗೆ ಶನಿವಾರ ಪತ್ರ ಬರೆದಿರುವ ಐಒಎ ಅಧ್ಯಕ್ಷ ನರಿಂದರ್ ಬಾತ್ರಾ ಈ ಕುರಿತು ಆದಷ್ಟು ಬೇಗ ನಿರ್ಧಾರ ಪ್ರಕಟಿಸಬೇಕು ಎಂದು ಕೋರಿದ್ದಾರೆ. ಸೆಪ್ಟೆಂಬರ್ನಲ್ಲಿ ರುವಾಂಡದಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ ಫೆಡರೇಷನ್ನ ಸಭೆಯನ್ನು ಬಹಿಷ್ಕರಿಸಲು ಐಒಎ ಶುಕ್ರವಾರ ನಿರ್ಧರಿಸಿತ್ತು.