<p><strong>ನವದೆಹಲಿ</strong>: ‘ಒಲಿಂಪಿಕ್ ಐಕಮತ್ಯ ಕಾರ್ಯಕ್ರಮ’ದಡಿ ಭಾರತ ಒಲಿಂಪಿಕ್ ಸಂಸ್ಥೆಗೆ ನೆರವು ನೀಡುವುದನ್ನು ಪುನರಾರಂಭಿಸಲು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ನಿರ್ಧರಿಸಿದೆ.</p>.<p>ಭಾರತ ಒಲಿಂಪಿಕ್ ಸಂಸ್ಥೆಯು ತನ್ನ ಒಳಜಗಳ ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕ್ರಮಗಳನ್ನು ಕೈಗೊಂಡ ಕಾರಣ ಸುಮಾರು ಒಂದು ವರ್ಷದ ನಂತರ ನೆರವು ನೀಡುವುದನ್ನು ಮುಂದುವರಿಸಲು ಐಒಸಿ ತೀರ್ಮಾನಿಸಿದೆ.</p>.<p>ಐಒಎ ಸಿಇಒ ರಘುರಾಮ ಅಯ್ಯರ್ ಅವರಿಗೆ ನಿಗದಿಪಡಿಸಿದ ಭಾರಿ ವೇತನ ವಿರೋಧಿಸಿ ಅವರ ನೇಮಕಕ್ಕೆ ಒಪ್ಪಿಗೆ ನೀಡಲು 12 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರು ನಿರಾಕರಿಸಿದ್ದರು. ಹೀಗಾಗಿ ಸಂಸ್ಥೆಯಲ್ಲಿ ಬಿಕ್ಕಟ್ಟು ತಲೆದೋರಿತ್ತು. ಇದರಿಂದಾಗಿ ಐಒಸಿಯು ಅಥ್ಲೀಟುಗಳ ಅಭಿವೃದ್ಧಿ ಯೋಜನೆಗೆ ನೀಡಲಾಗುವ ವಾರ್ಷಿಕ ₹15 ಕೋಟಿ ಅನುದಾನವನ್ನು ಕಳೆದ ವರ್ಷ ಸ್ಥಗಿತಗೊಳಿಸಿತ್ತು.</p>.<p>ಆದರೆ ಜುಲೈ 24ರಂದು ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರು ಐಒಎ ಅಧ್ಯಕ್ಷೆ ಪಿ.ಟಿ.ಉಷಾ ಮತ್ತು ಅವರ ವಿರುದ್ಧ ಬಂಡೆದ್ದ ಕಾರ್ಯಕಾರಿ ಸಮಿತಿ ಸದಸ್ಯರ ನಡುವೆ ಸಭೆ ನಡೆಸಿ ರಾಜಿಸಂಧಾನ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಒಲಿಂಪಿಕ್ ಐಕಮತ್ಯ ಕಾರ್ಯಕ್ರಮ’ದಡಿ ಭಾರತ ಒಲಿಂಪಿಕ್ ಸಂಸ್ಥೆಗೆ ನೆರವು ನೀಡುವುದನ್ನು ಪುನರಾರಂಭಿಸಲು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ನಿರ್ಧರಿಸಿದೆ.</p>.<p>ಭಾರತ ಒಲಿಂಪಿಕ್ ಸಂಸ್ಥೆಯು ತನ್ನ ಒಳಜಗಳ ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕ್ರಮಗಳನ್ನು ಕೈಗೊಂಡ ಕಾರಣ ಸುಮಾರು ಒಂದು ವರ್ಷದ ನಂತರ ನೆರವು ನೀಡುವುದನ್ನು ಮುಂದುವರಿಸಲು ಐಒಸಿ ತೀರ್ಮಾನಿಸಿದೆ.</p>.<p>ಐಒಎ ಸಿಇಒ ರಘುರಾಮ ಅಯ್ಯರ್ ಅವರಿಗೆ ನಿಗದಿಪಡಿಸಿದ ಭಾರಿ ವೇತನ ವಿರೋಧಿಸಿ ಅವರ ನೇಮಕಕ್ಕೆ ಒಪ್ಪಿಗೆ ನೀಡಲು 12 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರು ನಿರಾಕರಿಸಿದ್ದರು. ಹೀಗಾಗಿ ಸಂಸ್ಥೆಯಲ್ಲಿ ಬಿಕ್ಕಟ್ಟು ತಲೆದೋರಿತ್ತು. ಇದರಿಂದಾಗಿ ಐಒಸಿಯು ಅಥ್ಲೀಟುಗಳ ಅಭಿವೃದ್ಧಿ ಯೋಜನೆಗೆ ನೀಡಲಾಗುವ ವಾರ್ಷಿಕ ₹15 ಕೋಟಿ ಅನುದಾನವನ್ನು ಕಳೆದ ವರ್ಷ ಸ್ಥಗಿತಗೊಳಿಸಿತ್ತು.</p>.<p>ಆದರೆ ಜುಲೈ 24ರಂದು ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರು ಐಒಎ ಅಧ್ಯಕ್ಷೆ ಪಿ.ಟಿ.ಉಷಾ ಮತ್ತು ಅವರ ವಿರುದ್ಧ ಬಂಡೆದ್ದ ಕಾರ್ಯಕಾರಿ ಸಮಿತಿ ಸದಸ್ಯರ ನಡುವೆ ಸಭೆ ನಡೆಸಿ ರಾಜಿಸಂಧಾನ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>