<p><strong>ಕ್ವಾಲಾಲಂಪುರ</strong>: ಎಫ್ಐಎಚ್ ಜೂನಿಯರ್ ಪುರುಷರ ವಿಶ್ವಕಪ್ ಹಾಕಿ ಟೂರ್ನಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಕೊರಿಯಾ ವಿರುದ್ಧ ಗೆಲುವು ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಭಾರತ ತಂಡವು, ಗುರುವಾರ ಸ್ಪೇನ್ ತಂಡವನ್ನು ಎದುರಿಸಲಿದೆ. </p>.<p>ಮಂಗಳವಾರ ನಡೆದ ಪಂದ್ಯದಲ್ಲಿ ಉಪನಾಯಕ ಅರಿಜಿತ್ ಸಿಂಗ್ ಹುಂಡಲ್ ಅವರ ಹ್ಯಾಟ್ರಿಕ್ ಗೋಲುಗಳ ನೆರವಿನಿಂದ ಭಾರತವು 4–2ರಿಂದ ಕೊರಿಯಾ ತಂಡವನ್ನು ಮಣಿಸಿತ್ತು. ಎರಡನೇ ಪಂದ್ಯದಲ್ಲೂ ನಾಯಕ ಉತ್ತಮ್ ಸಿಂಗ್ ಬಳಗ ಆಕ್ರಮಣಕಾರಿ ಆಟ ಪ್ರದರ್ಶಿಸುವ ವಿಶ್ವಾಸದಲ್ಲಿದೆ.</p>.<p>ಮೊದಲ ಪಂದ್ಯದಲ್ಲಿ ಭಾರತ ಆಟಗಾರರು ಉತ್ತಮ ಪ್ರದರ್ಶನ ನೀಡಿದರೂ ತಂಡದ ಕೋಚ್ ಸಿ.ಆರ್.ಕುಮಾರ್ ತೃಪ್ತಿ ಹೊಂದಿಲ್ಲ. ಎದುರಾಳಿ ತಂಡಕ್ಕೆ ಅನಗತ್ಯ ಪೆನಾಲ್ಟಿ ಕಾರ್ನರ್ಗಳನ್ನು ಬಿಟ್ಟುಕೊಡುವುದನ್ನು ತಪ್ಪಿಸಬೇಕು ಎಂಬುದು ಅವರ ನಿಲುವು.</p>.<p>‘ಕೊರಿಯಾಗೆ ಎರಡು ಗೋಲುಗಳನ್ನೂ ಪೆನಾಲ್ಟಿ ಕಾರ್ನರ್ಗಳಲ್ಲಿ ಬಿಟ್ಟುಕೊಟ್ಟಿದ್ದೇವೆ. ಇಂತಹ ತಪ್ಪುಗಳು ಮರುಕಳಿಸದಂತೆ ಮುಂದಿನ ಪಂದ್ಯಗಳಲ್ಲಿ ಗಮನ ಹರಿಸಬೇಕಾಗಿದೆ’ ಎಂದು ಕುಮಾರ್ ಎಚ್ಚರಿಸಿದ್ದಾರೆ.</p>.<p>ಉತ್ತಮ್ ಸಿಂಗ್ ಮತ್ತು ಅರಿಜಿತ್ ಅವರನ್ನು ಹೊರತುಪಡಿಸಿ ತಂಡದಲ್ಲಿ ಹೊಸ ಆಟಗಾರರೇ ಹೆಚ್ಚು ಇದ್ದಾರೆ. ಇವರಿಬ್ಬರೂ ಕಳೆದ ಆವೃತ್ತಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಭಾರತ ತಂಡ, ಭುವನೇಶ್ವರದಲ್ಲಿ ನಡೆದ ಕೂಟದಲ್ಲಿ ಫ್ರಾನ್ಸ್ ವಿರುದ್ಧ ಸೋತು ನಾಲ್ಕನೇ ಸ್ಥಾನ ಪಡೆದಿತ್ತು.</p>.<p>ವಿಶ್ವ ಕ್ರಮಾಂಕದಲ್ಲಿ ಮೂರನೇ ಸ್ಥಾನದಲ್ಲಿರುವ ಭಾರತ ‘ಸಿ’ ಗುಂಪಿನ ಕೊನೆಯ ಪಂದ್ಯದಲ್ಲಿ ಪ್ರಬಲ ಕೆನಡಾ ವಿರುದ್ಧ ಶನಿವಾರ ಸೆಣಸಲಿದೆ.</p>.<p>ಟೂರ್ನಿಯಲ್ಲಿ ನಾಲ್ಕು ತಂಡಗಳಿರುವ 4 ಗುಂಪುಗಳನ್ನು ರಚಿಸಲಾಗಿದ್ದು, ಗುಂಪು ಹಂತದ ಪಂದ್ಯಗಳಲ್ಲಿ ಅಗ್ರಸ್ಥಾನ ಪಡೆಯುವ ಎರಡು ತಂಡಗಳು ಕ್ವಾರ್ಟರ್ ಫೈನಲ್ ಪ್ರವೇಶಿಸಲಿವೆ. ಭಾರತವು ಸ್ಪೇನ್ ವಿರುದ್ಧ ಗೆಲುವು ಸಾಧಿಸಿದಲ್ಲಿ ಕ್ವಾರ್ಟರ್ ಫೈನಲ್ ಹಾದಿ ಸುಗಮವಾಗಲಿದೆ.</p>.<p>ಭಾರತ ಈ ಟೂರ್ನಿಯಲ್ಲಿ ಎರಡು ಬಾರಿ (2001, 2016) ಚಾಂಪಿಯನ್ ಆಗಿದ್ದು, ಒಮ್ಮೆ (1997) ರನ್ನರ್ಸ್ ಅಪ್ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕ್ವಾಲಾಲಂಪುರ</strong>: ಎಫ್ಐಎಚ್ ಜೂನಿಯರ್ ಪುರುಷರ ವಿಶ್ವಕಪ್ ಹಾಕಿ ಟೂರ್ನಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಕೊರಿಯಾ ವಿರುದ್ಧ ಗೆಲುವು ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಭಾರತ ತಂಡವು, ಗುರುವಾರ ಸ್ಪೇನ್ ತಂಡವನ್ನು ಎದುರಿಸಲಿದೆ. </p>.<p>ಮಂಗಳವಾರ ನಡೆದ ಪಂದ್ಯದಲ್ಲಿ ಉಪನಾಯಕ ಅರಿಜಿತ್ ಸಿಂಗ್ ಹುಂಡಲ್ ಅವರ ಹ್ಯಾಟ್ರಿಕ್ ಗೋಲುಗಳ ನೆರವಿನಿಂದ ಭಾರತವು 4–2ರಿಂದ ಕೊರಿಯಾ ತಂಡವನ್ನು ಮಣಿಸಿತ್ತು. ಎರಡನೇ ಪಂದ್ಯದಲ್ಲೂ ನಾಯಕ ಉತ್ತಮ್ ಸಿಂಗ್ ಬಳಗ ಆಕ್ರಮಣಕಾರಿ ಆಟ ಪ್ರದರ್ಶಿಸುವ ವಿಶ್ವಾಸದಲ್ಲಿದೆ.</p>.<p>ಮೊದಲ ಪಂದ್ಯದಲ್ಲಿ ಭಾರತ ಆಟಗಾರರು ಉತ್ತಮ ಪ್ರದರ್ಶನ ನೀಡಿದರೂ ತಂಡದ ಕೋಚ್ ಸಿ.ಆರ್.ಕುಮಾರ್ ತೃಪ್ತಿ ಹೊಂದಿಲ್ಲ. ಎದುರಾಳಿ ತಂಡಕ್ಕೆ ಅನಗತ್ಯ ಪೆನಾಲ್ಟಿ ಕಾರ್ನರ್ಗಳನ್ನು ಬಿಟ್ಟುಕೊಡುವುದನ್ನು ತಪ್ಪಿಸಬೇಕು ಎಂಬುದು ಅವರ ನಿಲುವು.</p>.<p>‘ಕೊರಿಯಾಗೆ ಎರಡು ಗೋಲುಗಳನ್ನೂ ಪೆನಾಲ್ಟಿ ಕಾರ್ನರ್ಗಳಲ್ಲಿ ಬಿಟ್ಟುಕೊಟ್ಟಿದ್ದೇವೆ. ಇಂತಹ ತಪ್ಪುಗಳು ಮರುಕಳಿಸದಂತೆ ಮುಂದಿನ ಪಂದ್ಯಗಳಲ್ಲಿ ಗಮನ ಹರಿಸಬೇಕಾಗಿದೆ’ ಎಂದು ಕುಮಾರ್ ಎಚ್ಚರಿಸಿದ್ದಾರೆ.</p>.<p>ಉತ್ತಮ್ ಸಿಂಗ್ ಮತ್ತು ಅರಿಜಿತ್ ಅವರನ್ನು ಹೊರತುಪಡಿಸಿ ತಂಡದಲ್ಲಿ ಹೊಸ ಆಟಗಾರರೇ ಹೆಚ್ಚು ಇದ್ದಾರೆ. ಇವರಿಬ್ಬರೂ ಕಳೆದ ಆವೃತ್ತಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಭಾರತ ತಂಡ, ಭುವನೇಶ್ವರದಲ್ಲಿ ನಡೆದ ಕೂಟದಲ್ಲಿ ಫ್ರಾನ್ಸ್ ವಿರುದ್ಧ ಸೋತು ನಾಲ್ಕನೇ ಸ್ಥಾನ ಪಡೆದಿತ್ತು.</p>.<p>ವಿಶ್ವ ಕ್ರಮಾಂಕದಲ್ಲಿ ಮೂರನೇ ಸ್ಥಾನದಲ್ಲಿರುವ ಭಾರತ ‘ಸಿ’ ಗುಂಪಿನ ಕೊನೆಯ ಪಂದ್ಯದಲ್ಲಿ ಪ್ರಬಲ ಕೆನಡಾ ವಿರುದ್ಧ ಶನಿವಾರ ಸೆಣಸಲಿದೆ.</p>.<p>ಟೂರ್ನಿಯಲ್ಲಿ ನಾಲ್ಕು ತಂಡಗಳಿರುವ 4 ಗುಂಪುಗಳನ್ನು ರಚಿಸಲಾಗಿದ್ದು, ಗುಂಪು ಹಂತದ ಪಂದ್ಯಗಳಲ್ಲಿ ಅಗ್ರಸ್ಥಾನ ಪಡೆಯುವ ಎರಡು ತಂಡಗಳು ಕ್ವಾರ್ಟರ್ ಫೈನಲ್ ಪ್ರವೇಶಿಸಲಿವೆ. ಭಾರತವು ಸ್ಪೇನ್ ವಿರುದ್ಧ ಗೆಲುವು ಸಾಧಿಸಿದಲ್ಲಿ ಕ್ವಾರ್ಟರ್ ಫೈನಲ್ ಹಾದಿ ಸುಗಮವಾಗಲಿದೆ.</p>.<p>ಭಾರತ ಈ ಟೂರ್ನಿಯಲ್ಲಿ ಎರಡು ಬಾರಿ (2001, 2016) ಚಾಂಪಿಯನ್ ಆಗಿದ್ದು, ಒಮ್ಮೆ (1997) ರನ್ನರ್ಸ್ ಅಪ್ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>