‘ಕರ್ನಾಟಕದಲ್ಲಿ ಸಾಕಷ್ಟು ಮಂದಿ ಪ್ರತಿಭಾನ್ವಿತರಿದ್ದಾರೆ. ಹೀಗಿದ್ದರೂ ಬೆರಳೆಣಿಕೆಯಷ್ಟು ಮಂದಿ ಮಾತ್ರ ಪಿಕೆಎಲ್ನಲ್ಲಿ ಆಡುವ ಅವಕಾಶ ಪಡೆದಿದ್ದಾರೆ. ಉಳಿದವರಿಗೂ ಪಿಕೆಎಲ್ನ ಅನುಭವ ಸಿಗಬೇಕೆಂಬುದು ನಮ್ಮ ಉದ್ದೇಶ. ಈ ಕಾರಣದಿಂದಲೇ ಕರ್ನಾಟಕ ಪ್ರೊ ಕಬಡ್ಡಿ ಆಯೋಜಿಸಲು ನಿರ್ಧರಿಸಿದ್ದೇವೆ. ರಾಜ್ಯದ ಮಟ್ಟಿಗೆ ಇದು ಹೊಸ ಪ್ರಯತ್ನ. ಮಂಗಳೂರಿನಲ್ಲಿ ಎಂಟು ದಿನಗಳ ಕಾಲ 16 ಪಂದ್ಯಗಳು ನಡೆಯಲಿದ್ದು, ಸುಕೇಶ್ ಹೆಗ್ಡೆ, ಪ್ರಶಾಂತ್ ಕುಮಾರ್ ರೈ, ಜೀವಕುಮಾರ್ ಸೇರಿದಂತೆ ಹಲವು ‘ಸ್ಟಾರ್’ ಆಟಗಾರರು ಇದರಲ್ಲಿ ಆಡಲಿದ್ದಾರೆ’ ಎಂದು ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಸಂಸ್ಥೆಯ ಸಂಘಟನಾ ಕಾರ್ಯದರ್ಶಿ ಬಿ.ಸಿ.ರಮೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.