ಬೆಂಗಳೂರು: ಮೈಸೂರಿನ ಎಂ.ಯೋಗೇಂದ್ರ ಅವರು ಹೊಸಕೋಟೆಯ ಬಿ. ಚನ್ನಭೈರಗೌಡ ಕ್ರೀಡಾಂಗಣದಲ್ಲಿ ಭಾನುವಾರ ಮುಕ್ತಾಯಗೊಂಡ ಕರ್ನಾಟಕ ರಾಜ್ಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನಲ್ಲಿ 60 ವರ್ಷ ಮೇಲಿನ ವಿಭಾಗದಲ್ಲಿ 5 ಸಾವಿರ ಮೀಟರ್ಸ್ ಮತ್ತು 10 ಸಾವಿರ ಮೀಟರ್ಸ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಫೆಬ್ರುವರಿ ತಿಂಗಳಲ್ಲಿ ಪುಣೆಯಲ್ಲಿ ನಡೆಯುವ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಅವರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಯೋಗೇಂದ್ರ ಅವರು ಮೈಸೂರು ಅಥ್ಲೆಟಿಕ್ ಕ್ಲಬ್ ಕಾರ್ಯದರ್ಶಿಯೂ ಆಗಿದ್ದಾರೆ.