<p><strong>ಬೆಂಗಳೂರು</strong>: ವಿಶ್ವವಿದ್ಯಾಲಯ ಮಟ್ಟದ ಖೇಲೊ ಇಂಡಿಯಾ ಕ್ರೀಡಾಕೂಟದ ಎರಡನೇ ಆವೃತ್ತಿಗೆ ಮುಂದಿನ ವರ್ಷ ಮಾರ್ಚ್ ಐದರಂದು ಚಾಲನೆ ಸಿಗಲಿದೆ.</p>.<p>ಉಪಮುಖ್ಯಮಂತ್ರಿ ಸಿ. ಅಶ್ವತ್ಥನಾರಾಯಣ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಅವರ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ₹ 40 ಕೋಟಿ ವೆಚ್ಚ ಅಂದಾಜಿಸಲಾಗಿದ್ದು ರಾಜ್ಯ ಸರ್ಕಾರ ₹ 20 ಕೋಟಿ ಅನುದಾನ ನೀಡಲಿದೆ ಎಂದು ಸಚಿವರು ತಿಳಿಸಿದರು.</p>.<p>ನಗರದ ಕಂಠೀರವ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿರುವ ಕೂಟ 12 ದಿನ ನಡೆಯಲಿದ್ದು 18 ಸ್ಪರ್ಧೆಗಳು ಇರುತ್ತವೆ. 158 ವಿಶ್ವವಿದ್ಯಾಲಯಗಳಿಂದ 3182 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದು ತಾಂತ್ರಿಕ ಅಧಿಕಾರಿಗಳು, ಸಹಾಯಕ ಸಿಬ್ಬಂದಿ ಸೇರಿದಂತೆ ಆರುಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಸಭೆಯಲ್ಲಿ ತಿಳಿಸಲಾಯಿತು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲೀನಿ ರಜನೀಶ್, ಆಯುಕ್ತ ಗೋಪಾಲಕೃಷ್ಣ,ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಕೆ.ಗೋವಿಂದರಾಜು, ಖೇಲೊ ಇಂಡಿಯಾದ ಮುಖ್ಯಸ್ಥರು, ರಾಜೀವಗಾಂಧಿ ವಿಶ್ವವಿದ್ಯಾಲಯ ಮತ್ತು ಜೈನ್ ವಿಶ್ವವಿದ್ಯಾಲಯದ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಶ್ವವಿದ್ಯಾಲಯ ಮಟ್ಟದ ಖೇಲೊ ಇಂಡಿಯಾ ಕ್ರೀಡಾಕೂಟದ ಎರಡನೇ ಆವೃತ್ತಿಗೆ ಮುಂದಿನ ವರ್ಷ ಮಾರ್ಚ್ ಐದರಂದು ಚಾಲನೆ ಸಿಗಲಿದೆ.</p>.<p>ಉಪಮುಖ್ಯಮಂತ್ರಿ ಸಿ. ಅಶ್ವತ್ಥನಾರಾಯಣ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಅವರ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ₹ 40 ಕೋಟಿ ವೆಚ್ಚ ಅಂದಾಜಿಸಲಾಗಿದ್ದು ರಾಜ್ಯ ಸರ್ಕಾರ ₹ 20 ಕೋಟಿ ಅನುದಾನ ನೀಡಲಿದೆ ಎಂದು ಸಚಿವರು ತಿಳಿಸಿದರು.</p>.<p>ನಗರದ ಕಂಠೀರವ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿರುವ ಕೂಟ 12 ದಿನ ನಡೆಯಲಿದ್ದು 18 ಸ್ಪರ್ಧೆಗಳು ಇರುತ್ತವೆ. 158 ವಿಶ್ವವಿದ್ಯಾಲಯಗಳಿಂದ 3182 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದು ತಾಂತ್ರಿಕ ಅಧಿಕಾರಿಗಳು, ಸಹಾಯಕ ಸಿಬ್ಬಂದಿ ಸೇರಿದಂತೆ ಆರುಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಸಭೆಯಲ್ಲಿ ತಿಳಿಸಲಾಯಿತು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲೀನಿ ರಜನೀಶ್, ಆಯುಕ್ತ ಗೋಪಾಲಕೃಷ್ಣ,ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಕೆ.ಗೋವಿಂದರಾಜು, ಖೇಲೊ ಇಂಡಿಯಾದ ಮುಖ್ಯಸ್ಥರು, ರಾಜೀವಗಾಂಧಿ ವಿಶ್ವವಿದ್ಯಾಲಯ ಮತ್ತು ಜೈನ್ ವಿಶ್ವವಿದ್ಯಾಲಯದ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>