<p><strong>ಬೆಂಗಳೂರು:</strong> ಮಂಡ್ಯದ ಅಥ್ಲೀಟ್ ವಿಜಯಕುಮಾರಿ ಜಿ.ಕೆ. ಅವರು ತಿರುವನಂತಪುರದಲ್ಲಿ ಶನಿವಾರ ನಡೆದ ಏಳನೇ ಇಂಡಿಯನ್ ಓಪನ್ ಕೂಟದ ಮಹಿಳೆಯರ 400 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.</p>.<p>ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿಜಯಕುಮಾರಿ ಅವರು 53.55 ಸೆಕೆಂಡ್ಗಳಲ್ಲಿ ಗುರಿ ತಲುಪಿದರು. ತಮಿಳುನಾಡಿನ ವಿದ್ಯಾ ರಾಮರಾಜ್ (53.31ಸೆ) ಚಿನ್ನದ ಸಾಧನೆ ಮಾಡಿದರು. ಒಎನ್ಜಿಸಿ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಪೂವಮ್ಮ ರಾಜು (53.61ಸೆ) ಕಂಚಿನ ಪದಕ ತಮ್ಮದಾಗಿಸಿಕೊಂಡರು.</p>.<p>‘ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವುದು ಖುಷಿ ತಂದಿದೆ. ನನ್ನ ಸಂಕಷ್ಟದ ಸಮಯದಲ್ಲಿ ಧೈರ್ಯ ತುಂಬಿ ಆರ್ಥಿಕ ಸಹಾಯ ಮಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಚಿರಋಣಿಯಾಗಿದ್ದೇನೆ. ಅವರ ಬೆಂಬಲವಿಲ್ಲದಿದ್ದರೆ ಈ ಸಾಧನೆ ಸಾಧ್ಯವಾಗುತ್ತಿರಲಿಲ್ಲ’ ಎಂದು ವಿಜಯಕುಮಾರಿ ಪ್ರತಿಕ್ರಿಯಿಸಿದ್ದಾರೆ. </p>.<p>ಕೆ.ಆರ್. ಪೇಟೆ ತಾಲ್ಲೂಕಿನ ಗೌಡೇನಹಳ್ಳಿ ಮೂಲದ ವಿಜಯಕುಮಾರಿ ಅವರು ಆರ್ಥಿಕ ಮುಗ್ಗಟ್ಟು ಮತ್ತು ಗಾಯದ ಸಮಸ್ಯೆಯಿಂದ ಕ್ರೀಡೆಯಿಂದ ದೂರ ಸರಿಯುವ ನಿರ್ಧಾರಕ್ಕೆ ಬಂದಿದ್ದರು. ಆಕೆಯ ಕಷ್ಟಕ್ಕೆ ಸ್ಪಂದಿಸಿದ್ದ ಡಿ.ಕೆ. ಶಿವಕುಮಾರ್ ಅವರು ಸರ್ಕಾರದಿಂದ ₹ 10 ಲಕ್ಷ ಪ್ರೋತ್ಸಾಹಧನ ಘೋಷಿಸಿದ್ದರು. ಆ ಪೈಕಿ ಮೊದಲ ಕಂತಿನ ₹ 5 ಲಕ್ಷ ಈಗಾಗಲೇ ಹಸ್ತಾಂತರಿಸಿದ್ದರು. ಇದು ವಿಜಯಕುಮಾರಿ ಅವರ ತರಬೇತಿ ಮತ್ತು ಚಿಕಿತ್ಸೆಗೆ ನೆರವಾಗಿದೆ. </p>.<p>ಏಕಲವ್ಯ ಮತ್ತು ರಾಜ್ಯೋತ್ಸವ ಪ್ರಶಸ್ತಿಗಳಿಗೆ ಭಾಜನರಾಗಿರುವ ಅವರು, ಮುಂದಿನ ದಿನಗಳಲ್ಲಿ ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್ಗಳಲ್ಲಿ ಭಾಗವಹಿಸಿ ದೇಶಕ್ಕೆ ಪದಕ ತರುವ ಗುರಿಯನ್ನು ಹೊಂದಿದ್ದಾರೆ.</p>.<p>ವಿಜಯಕುಮಾರಿ ಅವರ ಕಠಿಣ ಶ್ರಮ, ಛಲ ಮತ್ತು ಸರ್ಕಾರದ ಬೆಂಬಲವು ಇತರ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಂಡ್ಯದ ಅಥ್ಲೀಟ್ ವಿಜಯಕುಮಾರಿ ಜಿ.ಕೆ. ಅವರು ತಿರುವನಂತಪುರದಲ್ಲಿ ಶನಿವಾರ ನಡೆದ ಏಳನೇ ಇಂಡಿಯನ್ ಓಪನ್ ಕೂಟದ ಮಹಿಳೆಯರ 400 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.</p>.<p>ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿಜಯಕುಮಾರಿ ಅವರು 53.55 ಸೆಕೆಂಡ್ಗಳಲ್ಲಿ ಗುರಿ ತಲುಪಿದರು. ತಮಿಳುನಾಡಿನ ವಿದ್ಯಾ ರಾಮರಾಜ್ (53.31ಸೆ) ಚಿನ್ನದ ಸಾಧನೆ ಮಾಡಿದರು. ಒಎನ್ಜಿಸಿ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಪೂವಮ್ಮ ರಾಜು (53.61ಸೆ) ಕಂಚಿನ ಪದಕ ತಮ್ಮದಾಗಿಸಿಕೊಂಡರು.</p>.<p>‘ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವುದು ಖುಷಿ ತಂದಿದೆ. ನನ್ನ ಸಂಕಷ್ಟದ ಸಮಯದಲ್ಲಿ ಧೈರ್ಯ ತುಂಬಿ ಆರ್ಥಿಕ ಸಹಾಯ ಮಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಚಿರಋಣಿಯಾಗಿದ್ದೇನೆ. ಅವರ ಬೆಂಬಲವಿಲ್ಲದಿದ್ದರೆ ಈ ಸಾಧನೆ ಸಾಧ್ಯವಾಗುತ್ತಿರಲಿಲ್ಲ’ ಎಂದು ವಿಜಯಕುಮಾರಿ ಪ್ರತಿಕ್ರಿಯಿಸಿದ್ದಾರೆ. </p>.<p>ಕೆ.ಆರ್. ಪೇಟೆ ತಾಲ್ಲೂಕಿನ ಗೌಡೇನಹಳ್ಳಿ ಮೂಲದ ವಿಜಯಕುಮಾರಿ ಅವರು ಆರ್ಥಿಕ ಮುಗ್ಗಟ್ಟು ಮತ್ತು ಗಾಯದ ಸಮಸ್ಯೆಯಿಂದ ಕ್ರೀಡೆಯಿಂದ ದೂರ ಸರಿಯುವ ನಿರ್ಧಾರಕ್ಕೆ ಬಂದಿದ್ದರು. ಆಕೆಯ ಕಷ್ಟಕ್ಕೆ ಸ್ಪಂದಿಸಿದ್ದ ಡಿ.ಕೆ. ಶಿವಕುಮಾರ್ ಅವರು ಸರ್ಕಾರದಿಂದ ₹ 10 ಲಕ್ಷ ಪ್ರೋತ್ಸಾಹಧನ ಘೋಷಿಸಿದ್ದರು. ಆ ಪೈಕಿ ಮೊದಲ ಕಂತಿನ ₹ 5 ಲಕ್ಷ ಈಗಾಗಲೇ ಹಸ್ತಾಂತರಿಸಿದ್ದರು. ಇದು ವಿಜಯಕುಮಾರಿ ಅವರ ತರಬೇತಿ ಮತ್ತು ಚಿಕಿತ್ಸೆಗೆ ನೆರವಾಗಿದೆ. </p>.<p>ಏಕಲವ್ಯ ಮತ್ತು ರಾಜ್ಯೋತ್ಸವ ಪ್ರಶಸ್ತಿಗಳಿಗೆ ಭಾಜನರಾಗಿರುವ ಅವರು, ಮುಂದಿನ ದಿನಗಳಲ್ಲಿ ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್ಗಳಲ್ಲಿ ಭಾಗವಹಿಸಿ ದೇಶಕ್ಕೆ ಪದಕ ತರುವ ಗುರಿಯನ್ನು ಹೊಂದಿದ್ದಾರೆ.</p>.<p>ವಿಜಯಕುಮಾರಿ ಅವರ ಕಠಿಣ ಶ್ರಮ, ಛಲ ಮತ್ತು ಸರ್ಕಾರದ ಬೆಂಬಲವು ಇತರ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>